ಚಾಮರಾಜನಗರ: ಭಕ್ತಾಧಿಯೊಬ್ಬರ ಮೂಲಕ ಶುಕ್ರವಾರ ಬೆಳಗ್ಗೆ ಮಾಜಿ ಸಿ.ಎಂ. ಎ¸.ಎಂ. ಕೃಷ್ಣ ಕಳುಹಿಸಿದ್ದ ಕಾಣಿಕೆಯನ್ನು ಸ್ವೀಕರಿಸಿದ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಇಂದು ಅದನ್ನು ದೇವರಿಗೆ ಧರಿಸಿದ್ದಾರೆ.ನಾಡಿನ ಪ್ರಮುಖ ದೇವಾಲಯವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನಿಗೆ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ 1,110 ಗ್ರಾಂ ತೂಕದ ಬೆಳ್ಳಿ ಕಣ್ಣುಗಳನ್ನು ಕಾಣಿಕೆಯಾಗಿ ಕೊಟ್ಟಿದ್ದಾರೆ.ಭಕ್ತಾಧಿಯೊಬ್ಬರ ಮೂಲಕ ಶುಕ್ರವಾರ ಬೆಳಗ್ಗೆ ಎಸ್.ಎಂ.ಕೆ ಕಳುಹಿಸಿದ್ದ ಕಾಣಿಕೆಯನ್ನು ಸ್ವೀಕರಿಸಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಇಂದು ಅದನ್ನು ದೇವರಿಗೆ ಧರಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ಸದಾಶಿವನಗರದಲ್ಲಿನ ಕೃಷ್ಣ ಅವರ ಮನೆಗೆ ಭೇಟಿ ಮಾಡಿ ಅಭಿನಂದನಾ ಪತ್ರ ಹಾಗೂ ದೇವರ ಪ್ರಸಾದ ನೀಡಿದ್ದಾರೆ.ಮಲೆ ಮಹದೇಶ್ವರ ಎಸ್.ಎಂ.ಕೃಷ್ಣ ಅವರ ಮನೆ ದೇವರಾಗಿದ್ದು, ಸಿದ್ಧಾರ್ಥ ನಿಧನದ ಬಳಿಕ ಕ್ಷೇತ್ರಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಈಗ ಮೊಮ್ಮಗನ ಮದುವೆ ಬಳಿಕ ದೇವರಿಗೆ ಕಾಣಿಕೆ ನೀಡಿ, ಶೀಘ್ರದಲ್ಲೇ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.Sign in to your account
Username or Email Address


Password

 Remember Me


