ಕಾರವಾರ: ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.ಮಾಜಿ ಸಚಿವರೊಬ್ಬರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇದೊಂದು ರಾಜಕೀಯ ಷಡ್ಯಂತ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದೇವೆ. ನಾಳೆ ಆಧಾರ ರಹಿತ ಎಂದು ಘೋಷಣೆ ಆದ ಮೇಲೆ ಹೋದ ಮಾನ ಮತ್ತೆ ಬರಲು ಸಾಧ್ಯವಿಲ್ಲ. ಏನು ಬೇಕಾದರೂ ಸಹಿಸಿಕೊಳ್ಳಲು ಸಿದ್ಧವಿದ್ದೇವೆ. ಸೋಲನ್ನು ಸಹಿಸಿಕೊಂಡಿದ್ದೇವೆ. ಈ ರೀತಿಯ ನೈತಿಕ ಅಧಃಪತನವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿದ್ದಾರೆ.ಹಳೆ ಸರ್ಕಾರವನ್ನು ತೆಗೆದು ಹೊಸ ಸರ್ಕಾರ ಬರಲು ಯಾರು ಕಾರಣರಾದರು ಅವರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂಬ ಅನೇಕ ಮಾಹಿತಿಯಿಂದ ತಿಳಿದುಕೊಂಡು ನಾವು ಈ ಸಿದ್ಧತೆ ಮಾಡಿಕೊಂಡಿದ್ದೇವೆ. ಒಬ್ಬ ವ್ಯಕ್ತಿಯ ಮಾನವೀಯತೆಯನ್ನ, ಗೌರವವನ್ನ ಈ ರೀತಿ ಹರಾಜು ಮಾಡುವುದು ಯಾವ ಪಕ್ಷಕ್ಕೂ ಶೋಭೆ ತರುವುದಿಲ್ಲ. ಇದನ್ನು ಪ್ರಸಾರ ಮಾಡುವ ಮಾಧ್ಯಮಕ್ಕೂ ಶೋಭೆ ತರತಕ್ಕದ್ದಲ್ಲ ಎಂದು ಕಿಡಿಕಾರಿದರು.Sign in to your account
Username or Email Address


Password

 Remember Me


