ಕೊಪ್ಪಳ: ಆಸ್ಪತ್ರೆಗೆ ಆಗಮಿಸಿದ ಮಹಿಳೆಯೊಬ್ಬರು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.ಜಿಲ್ಲೆಯ ಗೌರಿಪುರ ಗ್ರಾಮದ ಗರ್ಭಿಣಿ ಬೃಂದಾ ಅವರಿಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಕುಟುಂಬಸ್ಥರು ಕನಕಗಿರಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಬೆಳಿಗ್ಗೆ ಆರು ಗಂಟೆಗೆ ಆಸ್ಪತ್ರೆಯ ಮುಂಭಾಗ ಬಂದು ಬಾಗಿಲು ತೆಗೆಯಿರಿ ಎಂದು ಬೇಡಿಕೊಂಡರೂ ಅಲ್ಲಿದ್ದ ಸಿಬ್ಬಂದಿ ಬಂದು ನೋಡದೆ, ಸಮುದಾಯ ಆರೋಗ್ಯ ಕೇಂದ್ರದ ಬಾಗಿಲು ತೆರೆಯದೆ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಬೃಂದಾ ಅವರು ಹೆರಿಗೆ ನೋವಿನಿಂದ ಬಳಲಿ ಕೆಂದ್ರದ ಬಾಗಿಲಲ್ಲೆ ಹೆರಿಗೆಯಾಗಿದ್ದಾರೆ.ಬೃಂದಾ ಅವರು ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ಮನಕಲಕುವ ದೃಶ್ಯ ನೋಡಿ ಸ್ಥಳೀಯರು ದಂಗಾಗಿದ್ದಾರೆ. ಈ ರೀತಿ ಹೆರಿಗೆಯಾಗಿದ್ದರಿಂದ ಕುಟುಂಬಸ್ಥರು ಆರೋಗ್ಯ ಸಿಬ್ಬಂದಿ ವಿರುದ್ಧ ಹಿಡಿ ಶಾಪ ಹಾಕಿದ್ದಾರೆ. ವಿಷಯ ತಿಳಿಯುತ್ತಿದಂತೆ ಕುಟುಂಬಸ್ಥರು ಮತ್ತು ಕನ್ನಡ ಪರ ಸಂಘಟನೆಗಳು ಆರೋಗ್ಯ ಕೇಂದ್ರದ ಮುಂದೇ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


