ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕರೂರು ನಿವಾಸದಲ್ಲಿ ಕೊವೀಡ್ ಲಸಿಕೆ ಪಡೆದುಕೊಂಡಿದ್ದಾರೆ. ಹಿರೇಕೆರೂರು ನಿವಾಸದಲ್ಲಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ವಾಕ್ಸಿನ್ ನೀಡಿದ್ದಾರೆ.ನಂತರ ಮಾತನಾಡಿದ ಸಚಿವರು, ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೊರೊನಾ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನಮ್ಮ ಭಾರತದಲ್ಲಿಯೇ ತಯಾರಿಸಿದ ಕೊರೊನಾ ಲಸಿಕೆಗೆ ವಿಶ್ವಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ ಎಂದರು.ಕೊರೊನಾ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವರು ಕರೆ ನೀಡಿದರು.






 Advertisement 




Sign in to your account
Username or Email Address


Password

 Remember Me


