ಹಾಸನ: ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಅಡಿಕೆ ತೋಟದೊಳಗೆ ಕಾರು ನುಗ್ಗಿದ್ದು, ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಿರಬೆಳಗುಲಿ ಗ್ರಾಮ ಸಮೀಪದ ತಿರುವಿನಲ್ಲಿ ನಡೆದಿದೆ.ಹಿರೆಬೆಳಗುಲಿ ಗ್ರಾಮದ ರಾಮಸ್ವಾಮಿ (76) ಮೃತ ವ್ಯಕ್ತಿ. ರಾಮಸ್ವಾಮಿ ಹೊಳೆನರಸೀಪುರ ಪಟ್ಟಣಕ್ಕೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಹಾಸನದ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಅಡಿಕೆ ತೋಟದ ಒಳಗೆ ನುಗ್ಗಿ ನಿಂತಿದೆ.ಮೃತ ವ್ಯಕ್ತಿಯು ಎರಡು ದಿನಗಳ ಹಿಂದೆ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಮೃತ ವ್ಯಕ್ತಿಯ ಪುತ್ರನೊಬ್ಬ ಭಾರತೀಯ ಸೈನ್ಯದಲ್ಲಿ ಯೋಧನಾಗಿದ್ದು, ಕೆಲವು ದಿನಗಳ ಹಿಂದೆ ರಜೆ ಪಡೆದು ಕುಟುಂಬ ಸದಸ್ಯರ ಜತೆಯಲ್ಲಿ ಇರಲು ಬಂದಿದ್ದರು.ಘಟನೆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


