ಹಾವೇರಿ: ಸಾರಿಗೆ ನಿಗಮದ ಚಾಲಕರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಚಿದಂಬರ್ ನಗರದ ಒಂದನೇ ಕ್ರಾಸ್ ನಲ್ಲಿ ನಡೆದಿದೆ.ಸಂಗಮೇಶ ದೇಸಾಯಿ(40) ಮೃತಪಟ್ಟ ಚಾಲಕ. ಮೃತ ಚಾಲಕ ಮೂಲತಃ ರೋಣ ತಾಲ್ಲೂಕಿನ ಅರುಂಸಿ ಗ್ರಾಮದ ನಿವಾಸಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಹಾನಗಲ್ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು.15 ದಿನಗಳ ಹಿಂದೆ ಪತ್ನಿ, ಮಕ್ಕಳೊಂದಿಗೆ ಬಾಗಲಕೋಟೆ ಜಿಲ್ಲೆಯ ತವರು ಮನೆಗೆ ಹೋಗಿದ್ದರು. ಈ ಘಟನೆ ಕುರಿತಂತೆ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


