ಮೈಸೂರು: ಎಲ್ಲವನ್ನೂ ನಿಭಾಯಿಸುತ್ತೇನೆ, ಎಲ್ಲರಿಗು ನ್ಯಾಯ ಒದಗಿಸಿಕೊಡುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿಯಾಗಿದೆ. ಆ ಕೆಲಸವನ್ನು ಮಾಡುತ್ತೇನೆ ಎಂದು ವಿವಿಧ ಸಮುದಾಯದವರು ಮೀಸಲಾತಿ ಕೇಳುತ್ತಿರುವ ವಿಚಾರ ಕುರಿತು ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ನಿಭಾಯಿಸುತ್ತೇನೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತೇನೆ. ತಜ್ಞರ ಜೊತೆ ಚರ್ಚೆ ನಡೆಸಲಾಗುತ್ತಿದೆ. ನನಗೆ ಇಂತಹ ಸವಾಲುಗಳು ಹೊಸದಲ್ಲ. ಸವಾಲುಗಳು ಬಂದಾಗ ಖುಷಿಯಾಗುತ್ತದೆ. ಎದುರಿಸಬೇಕೆಂಬ ಶಕ್ತಿ ಹೆಚ್ಚಾಗುತ್ತದೆ, ಮತ್ತಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡುತ್ತೇನೆ. ಎಲ್ಲರೂ ತಮ್ಮ ತಮ್ಮ ಸಮುದಾಯಕ್ಕೆ ನ್ಯಾಯ ಕೇಳುತ್ತಿದ್ದಾರೆ. ಕೇಳುವುದು ಅವರ ಹಕ್ಕು, ಅದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.ಡಕೋಟಾ ಸರ್ಕಾರ ಎಂಬ ವಿರೋಧ ಪಕ್ಷದವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷಗಳ ಟೀಕೆಗಳಿಗೆ ಬಜೆಟ್ ನಂತರವೇ ಉತ್ತರ ಸಿಗಲಿದೆ. ಅವರ ಟೀಕೆಗಳಿಗೆ ಈಗ ಉತ್ತರ ನೀಡುವುದಿಲ್ಲ ಎಂದು ತಿಳಿಸಿದರು.Sign in to your account
Username or Email Address


Password

 Remember Me


