ವಿಜಯಪುರ : ಜಮೀನಿನ ಲೀಸ್ ಹಣ ಕೊಡಲಾಗದೇ ರೈತರೊಬ್ಬರು ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದೆ.ಪುಂಡಲಿಂಗ ಜೀರಟಗಿ (22) ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರಾಗಿದ್ದಾರೆ. ಸಾಲಬಾಧೆಯಿಂದ ಮನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.ಜಮೀನಿನಲ್ಲಿದ್ದ ಬೆಳೆ ಹಾಳಾದ ಕಾರಣ, ಜಮೀನಿನ ಲೀಸ್ ಹಣ ಕೊಡಲಾಗದೇ ಪರದಾಡುತ್ತಿದ್ದರಂತೆ. ಈ ಎಲ್ಲಾ ವಿಚಾರವಾಗಿ ಮನನೊಂದಿರುವ ಪುಂಡಲಿಂಗ ಜಮೀನಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷಿ ಮಾತ್ರವಲ್ಲದೇ ಖಾಸಗಿಯಾಗಿ ಕೂಡ ಪಡೆದ ಸಾಲವನ್ನು ಮರು ಪಾವತಿ ಮಾಡಲಾರದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


