ಮಡಿಕೇರಿ: ಬೋನಸ್, ವೈದ್ಯಕೀಯ ವೆಚ್ಚ ಸೇರಿದಂತೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ, ಕಾಫಿ ತೋಟದ ನೂರಾರು ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಸಮಸ್ಯೆಗೆ ಪರಿಹಾರ ಕೊಡಿಸುವಂತೆ ಬಿಬಿಟಿಸಿ ಎಲ್ಕ್ ಹಿಲ್ ಕಾಫಿ ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿರುವ ಬಿಬಿಟಿಸಿ ಎಲ್ಕ್ ಹಿಲ್ ಕಾಫಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಿಬಿಟಿಸಿ ಎಲ್ಕ್ ಹಿಲ್ ಕಾಫಿ ಕಚೇರಿ ಎದುರು ಜಮಾಯಿಸಿದ ನೂರಾರು ಕಾರ್ಮಿಕರು ಅಲ್ಲಿಯೇ ಧರಣಿ ಕುಳಿತು ತೋಟದ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕೆಲಸದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಜೊತೆಗೆ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಜೀವದ ಹಂಗು ತೊರೆದು ಕೆಲಸ ಮಾಡಬೇಕಾದ ಸ್ಥಿತಿ ಇದೆ. ನಾವಿರುವ ಲೈನ್ ಮನೆಗಳು ಸಂಪೂರ್ಣ ಹದಗೆಟ್ಟಿವೆ. ಹೀಗಾಗಿ ಮನೆಗಳು ಅಪಾಯಕರ ಸ್ಥಿತಿಯಲ್ಲಿದ್ದು ಅವುಗಳನ್ನು ದುರಸ್ತಿ ಮಾಡುವಂತೆ ಆಗ್ರಹಿಸಿದರು.






 Advertisement 




Sign in to your account
Username or Email Address


Password

 Remember Me


