ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ವಿವಿಧೆಡೆ ದಾಳಿ ನಡೆಸಿದ ಅಬಕಾರಿ ಪೊಲೀಸರು 12 ಬ್ಯಾರಲ್ ಗಳಲ್ಲಿನ 1,500 ಲೀಟರ್ ಬೆಲ್ಲದ ಕೊಳೆ, 50 ಲೀಟರ್ ಕಳ್ಳಭಟ್ಟಿ ಜಪ್ತಿ ಮಾಡಿದ್ದಾರೆ.ತಾಲೂಕಿನ ಗೋರೆಬಾಳ ಹಾಗೂ ಗೋರೆಬಾಳ ತಾಂಡಾದಲ್ಲಿ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಾಯಚೂರು ಮತ್ತು ಲಿಂಗಸಗೂರು ಅಬಕಾರಿ ವಲಯದ ಅಧಿಕಾರಿಗಳ ನೇತೃತ್ವದ ತಂಡದಿಂದ ದಾಳಿ ನಡೆದಿದೆ.ಕಳ್ಳಭಟ್ಟಿ ತಯಾರಿಸಿ, ಮಾರಾಟಕ್ಕೆ ಯತ್ನಿಸಿದ್ದ ಅರುಣಕುಮಾರ್ ಹಾಗೂ ಖೂಬಣ್ಣ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ದಾಳಿ ವೇಳೆ ಕಳ್ಳಭಟ್ಟಿ ತಯಾರಿಕೆಗೆ ಬಳಕೆ ಮಾಡುತಿದ್ದ ಸಲಕರಣೆಗಳು ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.Sign in to your account
Username or Email Address


Password

 Remember Me


