ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್‍ಗೆ ಹೈ ಕೋರ್ಟ್ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಹಲವು ದಿನಗಳ ಜೈಲು ವಾಸದ ಬಳಿಕ ಸಂಪತ್ ರಾಜ್‍ಗೆ ಜಾಮೀನು ಭಾಗ್ಯ ಸಿಕ್ಕಿದೆ.ನವೆಂಬರ್ 16ರಂದು ರಾತ್ರಿ 9 ಗಂಟೆಗೆ ಸಂಪತ್ ರಾಜ್ ಬಂಧನ ಮಾಡಲಾಗಿತ್ತು. ಒಂದು ತಿಂಗಳಿನಿಂದ ಎಸ್ಕೇಪ್ ಆಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು.ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಗುಣಮುಖವಾದ ಬಳಿಕ ಎಸ್ಪೇಕ್ ಆಗಿ ನಾಗರಹೊಳೆಯ ಫಾರ್ಮ್ ನಲ್ಲಿ ಆಶ್ರಯ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ರಿಯಾಜುದ್ದೀನ್ ತನ್ನ ಕಾರಿನಲ್ಲಿಯೇ ಸಂಪತ್ ರಾಜ್ ನನ್ನು ಕರೆದುಕೊಂಡು ತನ್ನ ಆಪ್ತರ ಬಳಿ ಬಿಟ್ಟಿದ್ದನು. ರಿಯಾಜುದ್ದೀನ್ ಶಿಷ್ಯರ ಚಲನವಲನ ಮೇಲೆಯೂ ಸಿಸಿಬಿ ತಂಡ ಕಣ್ಣಿಟ್ಟಿತ್ತು. ರಿಯಾಜುದ್ದೀನ್ ಶಿಷ್ಯರು ಸಂಪತ್ ರಾಜ್ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿತ್ತು.ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಕಿದ ವೇಳೆ ಸಂಪತ್ ರಾಜ್ ಕೂಗಳತೆ ದೂರದಲ್ಲಿಯೇ ಇದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರಿಂದ ಬಂಧನ ವಿಳಂಬವಾಗಿತ್ತು.Sign in to your account
Username or Email Address


Password

 Remember Me


