ವಿಜಯಪುರ: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದೋ? ಅಲ್ಲವೋ ಎನ್ನುವುದು ಸ್ಪಷ್ಟವಾಗುತ್ತಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು. ಸಂವಿಧಾನದ ಪ್ರತಿಯನ್ನು ಸುಡುವುದು. ಖಲಿಸ್ತಾನ ಪರ ಘೋಷಣೆ ಕೂಗುವುದು. ಇದೆಲ್ಲವನ್ನು ಗಮನಿಸಿದರೆ ಹೋರಾಟ ದಿಕ್ಕು ತಪ್ಪಿದೆ ಅನ್ನಿಸುತ್ತಿದೆ. ಅವರು ರೈತರಲ್ಲ ಎಂಬ ಸಂಶಯ ಮೂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿವೆ ಎಂದು ಕೇಂದ್ರದ ನಿಲುವನ್ನ ಸಮರ್ಥಿಸಿಕೊಂಡರು.ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಶ್ರದ್ಧೆ, ಭಕ್ತಿಯ ಪ್ರತಿಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದೂ ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೂ ಅಲ್ಲಿಗೆ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದರು.Sign in to your account
Username or Email Address


Password

 Remember Me


