ಬೆಂಗಳೂರು: ಅರಣ್ಯಕ್ಕೆ ಹೋಗುವಾಗ ಪತ್ನಿ ಜೊತೆಗೆ ಹೋಗುತ್ತೀರಾ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಚಿವ ಅರವಿಂದ ಲಿಂಬಾವಳಿಯನ್ನು ಪ್ರಶ್ನಿಸಿದ್ದಾರೆ.ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಉತ್ತರ ಕೊಡಲು ಮುಂದಾದಾಗ ರಮೇಶ್ ಕುಮಾರ್ ಮಧ್ಯಪ್ರವೇಶ ಮಾಡಿದರು.ಅರಣ್ಯಕ್ಕೆ ಪತ್ನಿ ಜೊತೆಗೆ ಹೋಗ್ತೀರಾ ಅಥವಾ ಒಬ್ಬನೇ ಹೋಗುತ್ತೀರಾ ಎಂದು ಪ್ರಶ್ನಿಸುವ ಮೂಲಕ ರಮೇಶ್ ಕುಮಾರ್, ಲಿಂಬಾವಳಿ ಕಾಳೆಲೆದಿದ್ದಾರೆ. ಇದಕ್ಕೆ ಉತ್ತರಿಸಿದ ಲಿಂಬಾವಳಿ, ಪತ್ನಿ ಸಮೇತ ಹೋಗಲ್ಲ, ನಾನೊಬ್ಬನೇ ಹೋಗುತ್ತೇನೆ. ಅರಣ್ಯ ಜೊತೆಗೆ ಕನ್ನಡ ಸಂಸ್ಕೃತಿ ಇಲಾಖೆ ನೀಡಿದ್ದಾರೆ. ಇದರಿಂದ ಕಾಡಿನ ಜೊತೆಗೆ ನಾಡಿಗೂ ಬರಬೇಕಾಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.Sign in to your account
Username or Email Address


Password

 Remember Me


