ಬೆಂಗಳೂರು: ಕನ್ನಡಿಗರ ಹೃದಯ ಊರ ಅಗಲ ಇದೆ. ಎಲ್ಲಾ ಭಾಷೆಯ ಸಿನಿಮಾಗಳನ್ನು ನೋಡುತ್ತಾರೆ. ಇಂಥಹ ಸ್ಪರ್ಧೆಯಲ್ಲಿ ನಾವು ಉಳಿಯುವುದು ಕಷ್ಟವಾಗಿದೆ ಎಂದು ನವರಸನಾಯಕ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದಾರೆ.ರಾಬರ್ಟ್ ರಿಲೀಸ್ ಸಮಸ್ಯೆ ಕುರಿತು ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ. ರಾಬರ್ಟ್ ನಿಸಿಮಾವನ್ನು ತೆಲುಗಿನಲ್ಲಿ ಬಿಡುಗಡೆಗೊಳಿಸಲು ಕೊಡದೆ ಇರುವುದಕ್ಕೆ ಕಾರಣವೇನು ಎಂದು ಟ್ವೀಟ್ ಮಾಡಿದ್ದಾರೆ.ಸತ್ಯ.!!
ಅಂದು ನಾನಾಡಿದ ಮಾತು ಕನ್ನಡಿಗರೆ ಸ್ವಾಭಿಮಾನಿಯಾಗಿ!ಕನ್ನಡಕ್ಕೆ ಮೊದಲು ಕೈಯತ್ತಿ ನಿಮ್ಮ ಕೈ ಕಲ್ಪವೃಕ್ಷವಾಗುತ್ತೆ ಎಂದು!ನನ್ನಭಾವನೆ ಅರ್ಥವಾಗದೆ ಸಮಯಸಾಧಕರು ಜಾಗೃತರಾಗಿ ನನ್ನ ಸತ್ಯದ ಸೊಲ್ಲು ಅಡಗಿಸಲು ಅಪಪ್ರಚಾರ ತಂತ್ರರೂಪಿಸಿದರು!ಕೆಲವರು ನಂಬಿದರು!ನನ್ನಪ್ರಾಮಾಣಿಕ ನುಡಿಗಳ ಸತ್ಯ ನಿಧಾನವಾಗಿ ಅರಿವಾಗುತ್ತೆ ದೌರ್ಭಾಗ್ಯ!ಧನ್ಯವಾದ???? https://t.co/dmFIJw6ywm— ನವರಸನಾಯಕ ಜಗ್ಗೇಶ್ (@Jaggesh2) January 30, 2021ಅಂದು ನಾನಾಡಿದ ಮಾತು ಕನ್ನಡಿಗರೆ ಸ್ವಾಭಿಮಾನಿಯಾಗಿ ಕನ್ನಡಕ್ಕೆ ಮೊದಲು ಕೈ ಎತ್ತಿ ನಿಮ್ಮ ಕೈ ಕಲ್ಪವೃಕ್ಷವಾಗುತ್ತದೆ ಎಂದು ನನ್ನ ಭಾವನೆಯಾಗಿತ್ತು. ಅರ್ಥವಾಗದೆ ಸಮಯಸಾಧಕರು ಜಾಗೃತರಾಗಿ ನನ್ನ ಸತ್ಯದ ಸೊಲ್ಲು ಅಡಗಿಸಲು ಅಪಪ್ರಚಾರ ತಂತ್ರರೂಪಿಸಿದರು. ಕೆಲವರು ನಂಬಿದರು ನನ್ನಪ್ರಾಮಾಣಿಕ ನುಡಿಗಳ ಸತ್ಯ ನಿಧಾನವಾಗಿ ಅರಿವಾಗುತ್ತದೆ. ದೌರ್ಭಾಗ್ಯ ಎಂದು ಟ್ವೀಟ್ ಮಾಡಿದ್ದಾರೆ. ಜೊತೆ ಅವರು ಈ ಹಿಂದೆ ಕಾರ್ಯಕ್ರಮದಲ್ಲಿ ಕನ್ನಡ ಅಭಿಮಾನದ ಕುರಿತಾಗಿ ಮಾತನಾಡಿರುವ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.???????????? https://t.co/1nDcM6uFMP— ನವರಸನಾಯಕ ಜಗ್ಗೇಶ್ (@Jaggesh2) January 30, 2021ಟ್ವಿಟ್ಟರ್ ವೀಡಿಯೋನಲ್ಲಿ ಏನಿದೆ?
ನಮ್ಮಲ್ಲಿ ಕೆಲವು ನ್ಯೂನತೆಗಳಿವೆ ನಮಗೆ ಬಹುತೇಕ ಅಮ್ಮನಿಗಿಂತ ಪಕ್ಕದ ಮೆನೆಯವರು ಚೆನ್ನಾಗಿ ಕಾಣುತ್ತಾರೆ. ಇಂತಹ ಸ್ವಭಾವ ನಮ್ಮಲ್ಲಿದೆ ಏನು ಮಾಡಲು ಸಾಧ್ಯವಿಲ್ಲಿ, ನಾವು ಕೇಳಿಕೊಂಡು ಬಂದಿರುವ ದೌರ್ಭಾಗ್ಯವಾಗಿದೆ. ಬೇರೆ ಊರುಗಳಲ್ಲಿ ಅವರವರದ್ದೇ ಚಿತ್ರಗಳನ್ನು ನೋಡಿಕೊಳ್ಳುತ್ತಾರೆ. ಎಲ್ಲರೂ ನಮ್ಮಂತೆ ಸಿನಿಮಾವನ್ನು ನಿರ್ಮಾಣ ಮಾಡುತ್ತಾರೆ. ಅವರು ಅವರ ಜಾಗದಲ್ಲಿ ಬಹಳ ಸ್ವಾಭಿಮಾನವಾಗಿ ನಮ್ಮ ಚಿತ್ರಗಳನ್ನು ನಾವು ನೋಡಿಕೊಳ್ಳುತ್ತೇವೆ. ಬೇರೆ ಯಾವುದು ಬೇಡ ಎನ್ನುವ ನಿರ್ಧಾರವನ್ನು ಮಾಡಿರುತ್ತಾರೆ. ಅಷ್ಟೊಂದು ಸ್ವಾಭಿಮಾನವನ್ನು ತೋರಿಸುತ್ತಾರೆ. ನಮ್ಮ ಹಾರ್ಟ್ ದೊಡ್ಡದು, ಊರ ಅಗಲ ಇದೆ ಕನ್ನಡಿಗರ ಹೃದಯ ಹಾಗಾಗಿ ಎಲ್ಲಾ ಭಾಷೆಯ 600ಕ್ಕಿಂತ ಹೆಚ್ಚಿನ ಸಿನಿಮಾಗಳನ್ನು ನಮ್ಮವರು ನೋಡುತ್ತಾರೆ. ಹೀಗಾಗಿ ಇಂಥಹ ಸ್ಪರ್ಧೆಯಲ್ಲಿ ನಾವು ಉಳಿಯುವುದು ಕಷ್ಟವಾಗಿದೆ ಎಂದು ಹಿಂದೆ ಒಮ್ಮೆ ಹೇಳಿರುವ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.






 Advertisement 




Sign in to your account
Username or Email Address


Password

 Remember Me


