ಕಾರವಾರ: ಮಹಾದಾಯಿ ವಿಚಾರದಲ್ಲಿ ಗೋವಾ, ಮಹಾರಾಷ್ಟ್ರದವರು ಅವರ ಪಾಪ್ಯುಲಾರಿಟಿಗೆ ಈ ರೀತಿ ಹೇಳಿಕೆ ನೀಡುತ್ತಾರೆ. ಮಹಾರಾಷ್ಟ್ರ, ಗೋವಾ ಒಂದೊಂದು ಹೇಳಿಕೆ ಕೊಡುತ್ತವೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ, ಸುಪ್ರೀಂ ಕೋರ್ಟ್ ತೀರ್ಪಿಗೆ ನಾವು ಬದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ಗಡಿ ವಿಚಾರದಲ್ಲೂ ಮಹಾಜನ್ ವರದಿಗೆ ನಾವು ಬದ್ಧರಾಗಿದ್ದೇವೆ. ಯಾರೋ ಒಬ್ಬರು ಹೇಳಿಕೆ ಕೊಟ್ಟರು ಅಂದರೆ ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ, ತಲೆ ಕೆಡಿಸಿಕೊಳ್ಳುವುದಿಲ್ಲ, ಏನು ತೀರ್ಮಾನ ಆಗಿದೆ ಅದರಂತೆ ನಾವು ನೆಡೆದುಕೊಳ್ಳುತ್ತೇವೆ ಎಂದರು.ಮುಖ್ಯಮಂತ್ರಿ ಬದಲಾಬಣೆ ಕುರಿತು ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬರ ಹೇಳಿಕೆಗೆ ಮಹತ್ವ ಇಲ್ಲ. ಯತ್ನಾಳ್ ಹೇಳಿಕೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರ ಸಮಾದಾನಕ್ಕೆ ಹೇಳಿಕೆ ಕೊಡುತಿದ್ದಾರೆ. ಪಕ್ಷದ ಮಿತಿ ಮೀರಿ ಹೇಳಿಕೆ ಕೊಡುತ್ತಿರುವುದನ್ನು ಪಕ್ಷ ಯಾವತ್ತೂ ಕ್ಷಮಿಸಲ್ಲ. ಕೇಂದ್ರದ ಶಿಸ್ತು ಸಮಿತಿಗೆ ಇವರ ಬಗ್ಗೆ ದೂರು ಸಲ್ಲಿಸಿದ್ದೇವೆ ಕ್ರಮ ತೆಗೆದುಕೊಳ್ಳುತ್ತಾರೆ. ಸಚಿವ ಸ್ಥಾನ ಗೊಂದಲ ಶಮನವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವರ ಜೊತೆ ಚರ್ಚೆ ಮಾಡಿ ಎಲ್ಲ ಸಮಸ್ಯೆ ಬಗೆಹರಿಸಿದ್ದಾರೆ ಎಂದರು.ಪಂಚಮಸಾಲಿ ಪ್ರತಿಭಟನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಪೇಕ್ಷೆ ಪಡುವುದು ತಪ್ಪಲ್ಲ, ಕ್ಯಾಬಿನೆಟ್ ನಲ್ಲಿ ಕುಳಿತು ಚರ್ಚೆ ಮಾಡುತ್ತೇವೆ. ವಾಲ್ಮೀಕಿ ಸಮಾಜಕ್ಕೆ ಶೇ.3ರಿಂದ ಶೇ.7.5ರ ವರೆಗೆ ಮೀಸಲು ಬೇಡಿಕೆ ಇದೆ. ಕುರುಬ ಸಮಾಜವನ್ನು ಎಸ್.ಟಿ ಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಪಂಚಮಸಾಲಿ 2ಎ ಗೆ ಸೇರಿಸುವ ಬೇಡಿಕೆ ಇದೆ. ಯಾವುದು ಸಿಂಧು ಯಾವುದು ಅಸಿಂಧು ಎಂಬುದನ್ನು ರಾಜ್ಯ, ಕೇಂದ್ರ ಸರ್ಕಾರ ಕುಳಿತು ತೀರ್ಮಾನ ಮಾಡುತ್ತವೆ. ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಮುಂದಿನ ತಿಂಗಳು 9ರಂದು ಮುಖ್ಯಮಂತ್ರಿ ನೇತ್ರತ್ವದಲ್ಲಿ ಎಲ್ಲ ಇಲಾಖೆಗಳ ಸಭೆ ಕರೆಯಲಾಗಿದೆ ಎಂದರು.Sign in to your account
Username or Email Address


Password

 Remember Me


