ಹಾವೇರಿ: ಗಣರಾಜ್ಯೋತ್ಸವ ದಿನದಂದು ರೈತರ ಹೆಸರಿನಲ್ಲಿ ದೆಹಲಿಯಲ್ಲಿ ನಡೆದ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಾವೇರಿಯಲ್ಲಿ ರೈತಸಂಘದ ಕಾರ್ಯಕರ್ತರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.ರೈತರು ನ್ಯಾಯಯುತ ಬೇಡಿಕೆಗಾಗಿ ಸತ್ಯಾಗ್ರಹ ನಡೆಸುವಾಗ ರೈತರ ಸತ್ಯಾಗ್ರಹಕ್ಕೆ ಮಸಿ ಬಳಿಯಲು ಕೆಲವು ಕಿಡಿಗೇಡಿಗಳು ಕೃತ್ಯ ನಡೆಸಿದ್ದಾರೆ. ಹೀಗಾಗಿ ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಸತ್ಯಕ್ಕೆ ಸಾವಿಲ್ಲ ಎಂಬ ಘೋಷಣೆಯಡಿ ರೈತರು ನಗರದ ಜಿಲ್ಲಾಡಳಿತ ಭವನದ ಮುಂದೆ ಸತ್ಯಾಗ್ರಹ ನಡೆಸಿದರು.ದೆಹಲಿಯಲ್ಲಿನ ರೈತರ ಸತ್ಯಾಗ್ರಹ ಹತ್ತಿಕ್ಕಲು ಕಾಣದ ಕೈಗಳು ಕಿಡಿಗೇಡಿಗಳ ಮೂಲಕ ಕೃತ್ಯ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಸರಕಾರಗಳು ರೈತರ ಸತ್ಯಾಗ್ರಹಕ್ಕೆ ಮಸಿ ಬಳಿಯುವ ಕೃತ್ಯಗಳನ್ನು ಮಾಡುವ ಕಿಡಿಗೇಡಿಗಳನ್ನು ಬಿಡದೇ ರೈತರ ನ್ಯಾಯಯುತ ಬೇಡಿಕೆ ಈಡೇರಿಸಲು ಮುಂದಾಗಬೇಕಿದೆ ಎಂದು ಆಗ್ರಹಿಸಿದರು.Sign in to your account
Username or Email Address


Password

 Remember Me


