ಗದಗ: ಯುಜಿಡಿ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಗೂಳಿಯೊಂದು ನರಳಾಡಿದ ಘಟನೆ ಗದಗ ಜಿಲ್ಲೆಯ ಪುಟ್ಟರಾಜ ಗವಾಯಿಗಳ ವೃತ್ತದ ಬಳಿ ಕಂಡು ಬಂದಿದೆ. ಜಂಗಳಿ ಗೂಳಿಯೊಂದು ತಡರಾತ್ರಿನೇ ಈ ಗುಂಡಿನಲ್ಲಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಮೃತ ಸಿಟಿ ಯೋಜನೆಯಡಿ ಯುಜಿಡಿ ಕಾಮಗಾರಿ ನಡೆಯುತ್ತಿದೆ. ಆದರೆ ಈ ಕಾಮಗಾರಿ ಆಮೆಗತಿನಲ್ಲಿ ಸಾಗುತ್ತಿದೆ. ಜೊತೆಗೆ ಹತ್ತಾರು ಅಡಿ ಆಳದ ಗುಂಡಿಯ ಪಕ್ಕ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳಲ್ಲದ ಕಾರಣ ನಗರಸಭೆ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇಕ್ಕಟ್ಟಾದ ಗುಂಡಿಯೊಳಗೆ ಹರಿವಿನಲ್ಲಿ ಬಿದ್ದ ಗೂಳಿಯೊಂದು ಮಲಗಲೂ ಆಗದೇ, ತಿರುಗಲೂ ಆಗದೇ, ಮೇಲೆ ಬರಲೂ ಆಗದೆ ನರಳಾಡಿದೆ. ಬೆಳಗ್ಗೆ ಕೆಲಸಕ್ಕೆ ಹೋಗುವ ದಾರಿ ಹೋಕರು ಈ ಮೂಕ ಪ್ರಾಣಿಯ ರೋಧನೆ ಕೇಳಿ, ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನಂತರ ಸ್ಥಳಕ್ಕೆ ಬಂದ 112 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ಕಾರ್ಯಾಚರಣೆಯಿಂದ ಗೂಳಿಯ ರಕ್ಷಣೆ ಮಾಡಲಾಯಿತು.ಅವಳಿ ನಗರದ ಅನೇಕ ಕಡೆಗಳಲ್ಲಿ ಹೀಗೆ ಸಾಕಷ್ಟು ಗುಂಡಿಗಳಿದ್ದು, ಸಾಕಷ್ಟು ಅವಾಂತರಗಳು ಸಂಭವಿಸಿವೆ. ಅಧಿಕಾರಿಗಳು ಮಾತ್ರ ನಮಗೆ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ ಎಂಬ ಆಕ್ರೋಶ ಜನರದ್ದಾಗಿದೆ. ಈ ವಿಚಾರವಾಗಿ ಜನ ರೊಚ್ಚಿಗೇಳುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.






 Advertisement 




Sign in to your account
Username or Email Address


Password

 Remember Me


