ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ ನಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಹಲವು ಕಾರ್ಮಿಕರು ಬಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.Pained by the loss of lives in Shivamogga. Condolences to the bereaved families. Praying that the injured recover soon. The State Government is providing all possible assistance to the affected: PM @narendramodi— PMO India (@PMOIndia) January 22, 2021ಈ ಸಂಬಂಧ ಪಿಎಂಓ ಇಂಡಿಯಾ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ಶಿವಮೊಗ್ಗದಲ್ಲಿ ಘನಘೋರ ದುರಂತ ಸಂಭವಿಸಿದ್ದು, ಇದರಿಂದ ನೋವಾಗಿದೆ. ಮೃತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳುವಂತಾಗಲಿ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ಬರೆದುಕೊಳ್ಳಲಾಗಿದೆ.ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಕ್ರಷರ್ ಮಾಫಿಯಾ ನಡೆಯುತ್ತಿರುವುದು ಬಯಲಾಗಿದೆ. ನಿನ್ನೆ ರಾತ್ರಿ 10.30ರ ಸಮಯಕ್ಕೆ ಏಕಾಏಕಿ ಭಾರೀ ಶಬ್ದಕ್ಕೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ಬಳಿಕ ಇದು ಅಕ್ರಮ ಕ್ರಷರ್ ನಲ್ಲಿ ಜಿಲೆಟಿನ್ ಕಡ್ಡಿಗಳು ಒಮ್ಮೆಲೆ ಸ್ಫೋಟಗೊಂಡಿದ್ದು ಎಂಬುದಾಗಿ ತಿಳಿದುಬಂದಿದೆ.ಸ್ಫೋಟದ ತೀವ್ರತೆಗೆ ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದ್ದು, ರುಂಡ ಮುಂಡ ಬೇರೆ ಬೇರೆಯಾಗಿ ಎಲ್ಲೆಂದರಲ್ಲಿ ಬಿದ್ದಿವೆ. ಅಂಚುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಫೋಟಗೊಂಡ ಸ್ಥಳದ ಸುತ್ತಮುತ್ತ ಮರಗಿಡಗಳು ಸಂಪೂರ್ಣ ಹಾನಿಗೊಳಗಾಗಿವೆ. ಸ್ಫೋಟದಿಂದ ಲಾರಿಯ ಬಿಡಿಭಾಗಗಳು ನೂರಾರು ಮೀಟರ್ ದೂರಕ್ಕೆ ಹಾರಿವೆ. Sign in to your account
Username or Email Address


Password

 Remember Me


