ಉಜಿರೆ: ಉಡುಪಿಯ ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಅರವಿಂದ ಹೆಬ್ಬಾರ್ ಸಂಪಾದಕತ್ವದಲ್ಲಿ ಪ್ರಕಟಿಸಿದ ‘ಈಶ್ವರಾರ್ಪಣ’ ಗ್ರಂಥವನ್ನು ಧರ್ಮಸ್ಥಳದಲ್ಲಿ ಭಾನುವಾರ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.ಈಶ್ವರಯ್ಯ ಅವರ ವಿಮರ್ಶಾ ಲೇಖನಗಳ ಸಂಗ್ರಹವೇ ‘ಈಶ್ವರಾರ್ಪಣ’. ಪುಸ್ತಕದ ಸಂಪಾದಕರಾದ ಪ್ರೊ. ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಕ್ಯಾಮರಾಗಳ ವ್ಯವಸ್ಥಿತ ಜೋಡಣೆ ಬಗ್ಗೆ ಈಶ್ವರಯ್ಯ ನೀಡಿದ ಸಹಕಾರವನ್ನು ಹೆಗ್ಗಡೆಯವರು  ಸ್ಮರಿಸಿದ್ದಾರೆ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶಾಂತಿವನ ಟ್ರಸ್ಟ್‍ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.Sign in to your account
Username or Email Address


Password

 Remember Me


