ಬೆಂಗಳೂರು:2023 ರಲ್ಲಿ ಜೆಡಿಎಸ್‌ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರೆ ಪಂಚರತ್ನ ಯೋಜನೆ ಜಾರಿಗೆ ತರುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೆ ಒಂದು ಸೂರು, ಎಲ್.ಕೆ.ಜಿಯಿಂದ 12 ನೇ ತರಗತಿವರೆಗೆ ಉಚಿತ ಗುಣಮಟ್ಟದ ಶಿಕ್ಷಣ, ರಾಜ್ಯದ ಎಲ್ಲಾ ಜನರಿಗೆ ವಿಶೇಷ ಆರೋಗ್ಯ ಕಾರ್ಯಕ್ರಮ, ರಾಜ್ಯದ ರೈತರ ಅಭಿವೃದ್ಧಿಗೆ ವಿಶೇಷ ಯೋಜನೆ, ಪ್ರತಿ ಯುವಕರಿಗೂ ಉದ್ಯೋಗ ನೀಡುವ ಮಹತ್ವದ ಕಾರ್ಯಕ್ರಮಗಳನ್ನ ಅನುಷ್ಠಾನ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು. ಒಂದು ವೇಳೆ ನನ್ನ ಅಧಿಕಾರದಲ್ಲಿ ಈ ಯೋಜನೆಗೆಗಳನ್ನ ಜಾರಿಗೆ ತರದೇ ಹೋದರೆ ನನ್ನ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಸವಾಲು ಎಸೆದ ಎಚ್‌ಡಿಕೆ ಪಕ್ಷ ಸಂಘಟನೆ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಮೊದಲ ಪ್ರವಾಸ ಜನವರಿ 29, 30 ರಂದು ಹುಬ್ಬಳ್ಳಿ ಭಾಗದಿಂದ ಪ್ರಾರಂಭ ಮಾಡುವುದಾಗಿ ತಿಳಿಸಿದರು.ಪಕ್ಷ ಸಂಘನೆಗಾಗಿ ಜೆಡಿಎಸ್ ಸಂಘಟನೆ ಮಾಡಲಾಗುತ್ತಿದೆ. ಹೀಗಾಗಿ ಹೊಸ ತಂಡ ರಚನೆ ಮಾಡುವ ನಿಟ್ಟಿನಲ್ಲಿ ಈಗ ಇರುವ ಎಲ್ಲಾ ಘಟಕಗಳನ್ನ ವಿಸರ್ಜನೆ ಮಾಡಲಾಗಿದೆ. ಮಧ್ಯ ಕರ್ನಾಟಕ, ಹೈದರಾಬಾದ್‌ ಕರ್ನಾಟಕ, ಮುಂಬೈ ಕರ್ನಾಟಕ, ಮೈಸೂರು ಭಾಗ, ಬೆಂಗಳೂರು ನಗರ, ಕರಾವಳಿ ಭಾಗ, ಕೋಲಾರ, ಚಿಕ್ಕಬಳ್ಳಾಪುರ ಭಾಗ ಸೇರಿ 7 ವಿಭಾಗ ಮಟ್ಟದಲ್ಲಿ ವಿಶೇಷ ಸಮಿತಿ ರಚಿಸಲಾಗುತ್ತದೆ. ಅ ಸಮಿತಿಯು ಪ್ರತಿ ಜಿಲ್ಲೆಗೆ ಪ್ರವಾಸ ಮಾಡಿ ಅಲ್ಲಿನ ನಾಯಕರು, ಕಾರ್ಯಕರ್ತರು ಜೊತೆ ಸಂವಾದ, ಅಭಿಪ್ರಾಯ ನಡೆಸಿ ಸಮಿತಿ ರಚನೆ ಮಾಡಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದು ತಿಳಿಸಿದರು.ಇಂದು ಜೆ.ಡಿ.ಎಸ್ ಪಕ್ಷದ ಕೇಂದ್ರ ಕಛೇರಿ ಜೆ.ಪಿ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷರಾದ ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗಿಯಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಿದರು. pic.twitter.com/WOE5vjnysI— Janata Dal Secular (@JanataDal_S) January 18, 2021ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಕೋರ್ ಕಮಿಟಿ ನಿರ್ಧಾರ ಮಾಡಿದೆ. ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೂ ಪಕ್ಷ ಸಿದ್ದವಾಗಲಿದೆ ಎಂದು ವಿವರಿಸಿದರು.Sign in to your account
Username or Email Address


Password

 Remember Me


