ಬೆಂಗಳೂರು: ಕೊರೊನಾದಿಂದಾಗಿ ರದ್ದಾಗಿರುವ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವಂತೆ ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಲಾವಿದರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್, ಸರ್ಕಾರಕ್ಕೆ ಮನವಿ ಸಹ ಮಾಡಿಕೊಂಡಿದ್ದಾರೆ.ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜೊತೆಗಿದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ. ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನ ಈ ವಿಷಯವಾಗಿ ಗಮನ ಹರಿಸಲು ಮತ್ತು ನಿಮ್ಮಿಂದಾಗುವ ನೆರವನ್ನ ನೀಡಲು ವಿನಂತಿಸುವೆ. ಹಾಗೆ ಈ ಕಲಾವಿದರ ಪರವಾಗಿ ಸರ್ಕಾರ ಸಹ ಪೂರಕ ಕ್ರಮಗಳನ್ನ ಕೈಗೊಳ್ಳಲು ಕೋರುತ್ತೇನೆ. ಏಕೆದಂರೆ ದೂರದರ್ಶನವಿಲ್ಲದ ಕಾಲದಿಂದಲೂ ನಮ್ಮನ್ನ ರಂಜಿಸುತ್ತಿರುವ ಕಲಾ ಬಳಗವನ್ನ ಮುಂದಿನ ತಲೆಮಾರುಗಳ ತನಕ ಕಾಪಾಡಿಕೊಳ್ಳಬೇಕಾದುದು ನಮ್ಮೆಲ್ಲರ ಕರ್ತವ್ಯವೆಂದು ಭಾವಿಸಿದ್ದೇನೆ. ನಮ್ಮ ಈ ಪ್ರತಿಭೆಗಳ ಪರವಾಗಿ ನಾವೇ ನಿಲ್ಲದಿದ್ರೆ ಬೇರಾರು ನಿಲ್ಲುತ್ತಾರೆ ಅಲ್ಲವೇ ಎಂದಿದ್ದಾರೆ.ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಲಾವಿದರು, ಜಾತ್ರೆ, ಉತ್ಸವ, ರಾಜ್ಯೋತ್ಸವ ನಡೆಸಲು ಪ್ರೋತ್ಸಾಹ ನೀಡಬೇಕು. ವಾದ್ಯಗೋಷ್ಠಿ ಕಲಾವಿದರಿಗೆ 5 ಸಾವಿರ ರೂಪಾಯಿ ಆರ್ಥಿಕ ಸಹಾಯದ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯ ನೀಡಬೇಕು. ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ನಮಗೂ ಕೊಡಬೇಕು ಎಂದು ಪ್ರತಿಭಟನಾ ನಿರತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.???????????????????????????????? a request to all my fnzz, colleagues and Govt. pic.twitter.com/BiiZVldJZH— Kichcha Sudeepa (@KicchaSudeep) January 18, 2021Sign in to your account
Username or Email Address


Password

 Remember Me


