ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭ ಕೊಡಗು ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗೊಂಡಿರುವ ಶಾಸಕ ಅಪ್ಪಚ್ಚು ರಂಜನ್ ಕೊನೆಗೂ ಮೌನ ಮುರಿದಿದ್ದಾರೆ. ಬಕೆಟ್ ಹಿಡಿಯುವವರಿಗೆ ಸಚಿವಸ್ಥಾನ ಕೊಡಲಾಗಿದೆ ಎನ್ನುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಮಡಿಕೇರಿಯಲ್ಲಿ ಕೋವಿಶೀಲ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜಿಲ್ಲಾಸ್ಪತ್ರೆಗೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಪ್ರಾಮಾಣಿಕವಾಗಿ ಸಂಘದ ಮಾತು ಕೇಳಿಕೊಂಡು ತಲೆಯಾಡಿಸುತ್ತಾ ಸುಮ್ಮನೆ ಇದ್ದ ನಮ್ಮನ್ನು ಕಡೆಗಣಿಸಲಾಗಿದೆ. ಪಕ್ಷದ ವಿಚಾರ ಬೀದಿಗೆ ಬರಬಾರದು ಎಂದು ಸುಮ್ಮನೆ ಇದ್ದೆವು. ಇನ್ನು ಹತ್ತು ದಿನಗಳು ಕಳೆಯಲಿ ಬಳಿಕ ಕೇಂದ್ರ ನಾಯಕರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪಕ್ಷದ ವಿರುದ್ಧ ಗುಡುಗಿದ್ದಾರೆ.ಹಾಗೆ ಎಂಎಲ್ ಸಿ ವಿಶ್ವನಾಥ್ ಹೇಳಿರುವುದು ಸರಿಯಾಗಿಯೇ ಇದೆ. ಸೈನಿಕನಿಂದಲೇ ವಿಶ್ವನಾಥ್ ಸೋತಿದ್ದಾರೆ. ಚುನಾವಣೆ ಸಂದರ್ಭ ಹುಣಸೂರು ಉಸ್ತುವಾರಿಯನ್ನು ನಾನೇ ಹೊತ್ತಿದ್ದೆ. ಆ ವೇಳೆ ಎಲ್ಲವನ್ನೂ ನಾನು ಚೆನ್ನಾಗಿ ನೋಡಿದ್ದೇನೆ. ಚುನಾವಣೆಗೆ ಎರಡು ದಿನ ಇರುವಾಗ ಏನೆಲ್ಲಾ ನಡೆಯಿತು ಎನ್ನುವುದು ನನಗೆ ಗೊತ್ತಿದೆ. ಸೈನಿಕನಿಂದಾಗಿಯೇ ವಿಶ್ವನಾಥ್ ಸೋತಿರುವುದು ಅವರ ಸೋಲಿಗೆ ಕಾರಣವಾದವರಿಗೆ ಸಚಿವಸ್ಥಾನ ನೀಡಿರುವುದು ದುರಂತ ಎಂದು ಹೇಳುವ ಮೂಲಕ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದ್ದಲ್ಲದೆ, ಸಚಿವ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.ಬಿಜೆಪಿಯ ಬೆಳವಣಿಗಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಇನ್ನು ಶಾಸಕ ಜಮೀರ್ ಅಹ್ಮದ್ ಕ್ಷೇತ್ರಕ್ಕೆ 200 ಕೋಟಿ ರೂಪಾಯಿ ಅನುದಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದೆ. ಬೇರೆ ಬೇರೆ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಆ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ಬೆಂಗಳೂರು ನಗರದ ಕ್ಷೇತ್ರಕ್ಕೆ ಅಷ್ಟೊಂದು ಅನುದಾನವನ್ನು ಕೊಡುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


