ಬೆಂಗಳೂರು: ಮೊದಲು ಡಿ ಗ್ರೂಪ್ ನೌಕರರಿಗೆ ಕೊರೊನಾ ಲಸಿಕೆ ನೀಡುತ್ತಿರುವ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ಹೊರ ಹಾಕಿದ್ದಾರೆ.ಲಸಿಕೆ ಬಂದಿರುವುದು ಸಂತೋಷ. ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಟ್ವೀಟ್ ಮಾಡಿದ್ದಾರೆ.ಲಸಿಕೆ ಪಡೆದ ನಂತರ ಕೊರೊನಾ ನಿಯಮಗಳನ್ನ ಮರೀಯಬೇಡಿ: ಪ್ರಧಾನಿ ಮೋದಿ– ಕೊರೊನಾ ವಾರಿಯರ್ಸ್ ನೆನೆದು ಮೋದಿ ಭಾವುಕ – ನಮ್ಮ ಲಸಿಕೆ ಸುರಕ್ಷಿತ, ಕಡಿಮೆ ಬೆಲೆ https://t.co/r1NDp6YXoe#PMModi #CoronaVirus #COVID19 #KannadaNews #Karnataka #Covishield #Covaxin #CoronaVaccine— PublicTV (@publictvnews) January 16, 2021ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.— UT Khadér (@utkhader) January 16, 2021






 Advertisement 




Sign in to your account
Username or Email Address


Password

 Remember Me


