ಮೈಸೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ಕೈಗೊಳ್ಳಲಾಗಿದೆ. ಅಂತೆಯೇ ಮೈಸೂರಿನಲ್ಲಿ ಈ ಅಭಿಯಾನಕ್ಕೆ ನಟ ಅಭಿಷೇಕ್ ಅಂಬರೀಶ್ ಚಾಲನೆ ನೀಡಿದ್ದಾರೆ.ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಿಧಿ ಸಮರ್ಪಣಾ ಅಭಿಯಾನ ಆಯೋಜಿಸಲಾಗಿತ್ತು. ಹೀಗಾಗಿ ಟ್ರಸ್ಟ್ ರಾಮಮಂದಿರ ನಿರ್ಮಾಣಕ್ಕೆ ಹಣ ನೀಡುವ ಸಲುವಾಗಿ ಅಭಿಯಾನ ಹಮ್ಮಿಕೊಂಡಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಅಭಿಷೇಕ್ ಚಾಲನೆ ನೀಡಿದ್ದಾರೆ.ಚಾಲನೆ ನೀಡಿದ ಬಳಿಕ ನಟ ಟ್ರಸ್ಟ್ ಗೆ ಸ್ವತಃ ದೇಣಿಗೆ ನೀಡಿದ್ದಾರೆ. ಈ ವೇಳೆ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.ಈಗಾಗಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಲಕ್ಷ ದೇಣಿಗೆ ನೀಡಲಾಗಿದೆ. ಹಾಗೆಯೇ ನಟಿ ಪ್ರಣಿತಾ ಕೂಡ ಕೈ ಜೋಡಿಸಿದ್ದು, ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದರು. ಈ ಕುರಿತು ಟ್ವೀಟ್ಟರ್‍ನಲ್ಲಿ ವೀಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದ ನಟಿ, ಅಯೋಧ್ಯೆ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಭಾಗವಾಗಿ ಆರಂಭಿಕವಾಗಿ 1 ಲಕ್ಷ ರೂ. ನೀಡುವುದಾಗಿ ಪ್ರತಿಜ್ಞೆ ಸ್ವೀಕರಿಸುತ್ತಿದ್ದೇನೆ. ನೀವೂ ಸಹ ಇದರ ಭಾಗವಾಗಿ ಐತಿಹಾಸಿಕ ಅಭಿಯಾನಕ್ಕೆ ಕೈ ಜೋಡಿಸಿ ಎಂದು ನಟಿ ಮನವಿ ಮಾಡಿದ್ದರು.ಅಯೋಧ್ಯೆಯ ಭವ್ಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯಕ್ಕಾಗಿ ನಿಧಿ ಸಮರ್ಪಣಾ ಅಭಿಯಾನ ಶುರುವಾಗಿದೆ . ಇದಕ್ಕೆ ನನ್ನ ಕಡೆಯಿಂದ ಕಿರು ಕಾಣಿಕೆಯಾಗಿ ರೂ. ೧ ಲಕ್ಷ ಸಮರ್ಪಿಸುತಿದ್ದೇನೆ . ಬನ್ನಿ ಈ ಐತಿಹಾಸಿಕ ಕಾರ್ಯಕ್ಕೆ ಕೈ ಜೋಡಿಸಿಜೈ ಶ್ರೀ ರಾಮ್ #RamMandirNidhiSamarpan pic.twitter.com/i7cVpW4auW— Pranitha Subhash (@pranitasubhash) January 13, 2021Sign in to your account
Username or Email Address


Password

 Remember Me


