ರಾಮನಗರ: ಡಿಕೆ ಸೋದರರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಬಹಿರಂಗವಾಗಿ ಚಾಲೆಂಜ್ ಹಾಕಿದ್ದಾರೆ.ರಾಮನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಪಕ್ಷದಲ್ಲಿ ಸ್ವಲ್ಪ ಗೊಂದಲಗಳಿರೋದು ನಿಜ. ಅದನ್ನ ಪರಿಹರಿಸುವ ಕೆಲಸವನ್ನ ಕುಮಾರಸ್ವಾಮಿ ಅವರು ಮಾಡುತ್ತಿದ್ದಾರೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷನಾಗಿ 30 ಜಿಲ್ಲೆಗಳ ಪ್ರವಾಸ ನಡೆಸುತ್ತಿದ್ದೇನೆ. ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಒಳ್ಳೆಯ ಕೆಲಸಗಳನ್ನ ಮಾಡಿದ್ದು, ಅದನ್ನ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡಲಾಗುತ್ತೆ. ಪಕ್ಷ ಸಂಘಟನೆಯ ಜವಾಬ್ದಾರಿಯನ್ನ ಹಿರಿಯರು ನನಗೆ ನೀಡಿದ್ದು, ಅದನ್ನ ನಿರ್ವಹಿಸುತ್ತಿದ್ದೇನೆ ಎಂದರು.ಎಚ್ಚರಿಕೆ ಅಂತ ಹೇಳಿದ್ಯಾರಿಗೆ?: ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮದೇ ಮತಗಳು ಕನಕಪುರದಲ್ಲಿ, 2023ಕ್ಕೆ ಇಲ್ಲಿ ಸೂಕ್ತ ಅಭ್ಯರ್ಥಿ ಇಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ. ಕೆಲವರು ನಮ್ಮ ಕ್ಷೇತ್ರಗಳಿಗೆ ಕೈ ಹಾಕ್ತಿದ್ದಾರೆ. ಹಾಗಾಗಿ ನಾವು ಸಹ ಅವರ ಕ್ಷೇತ್ರಕ್ಕೆ ಕೈ ಹಾಕಬೇಕಾಗುತ್ತೆ ಅಂತ ಎಚ್ಚರಿಕೆ ಕೊಡಲು ಇಷ್ಟಪಡುತ್ತೇನೆ ಅಂದ್ರು.Sign in to your account
Username or Email Address


Password

 Remember Me


