ಮಡಿಕೇರಿ: ಇಂದಿನ ದಿನಗಳಲ್ಲಿ ಚುನಾವಣೆ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ. ಹಣವಿಲ್ಲದೆ ಏನೂ ಇಲ್ಲ ಎನ್ನುವಂತಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ಬೇರು ಮಟ್ಟದಲ್ಲಿ ಭದ್ರಗೊಳ್ಳಬೇಕೆಂದು ಗ್ರಾಮಪಂಚಾಯಿತಿ ಚುನಾವಣೆ ಮಾಡಲಾಗುತ್ತದೆ. ಆದರೆ ಹಣವಿಲ್ಲದೆ ಗೆದ್ದವರು ಯಾರಿದ್ದಾರೆ? ಮತದಾರರೇ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಕಡಿವಾಣವೆಲ್ಲಿ ಎಂದು ಪ್ರಶ್ನಿಸಿದರು.ಜಿಲ್ಲಾ, ತಾಲೂಕು ಪಂಚಾಯಿತಿಗಿಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಪೈಪೋಟಿ ಹೆಚ್ಚಿದೆ. ಈ ಬಾರಿ ಅನುದಾನ ಹೆಚ್ಚು ಬರುತದೆ ಎಂದು ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡುವವರಿಗಿಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.ಪ್ರಧಾನಿ ಮೋದಿಯವರ ಆಶಯದಂತೆ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬರಬೇಕು. ಆಗ ರಾಷ್ಟ್ರದ ಸಾಕಷ್ಟು ಹಣ ಉಳಿತಾಯವಾಗುತ್ತದೆ ಎಂದು ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.Sign in to your account
Username or Email Address


Password

 Remember Me


