ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು.ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು.ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ ಮಠ ಮತ್ತು ಎಲ್ಲ ಶಾಖಾ ಮಠಗಳು ರಾಮಮಂದಿರ ನಿರ್ಮಾಣಕ್ಕೆ ಸಂಪೂರ್ಣವಾಗಿ ಸಹಕರಿಸುತ್ತವೆ ಎಂದರು. ಪೇಜಾವರ ಶ್ರೀಗಳು ಮಾತನಾಡಿ, ಶ್ರೀರಾಮನ ಗುಣಗಳನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಪ್ರಚಾರಕ ಸುಧೀರ್ ಮಾತನಾಡಿ, ರಾಮಜನ್ಮಭೂಮಿ 492 ವರ್ಷಗಳ ಹೋರಾಟ. ಈ ಅಭಿಯಾನ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು.ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರು ಹಾಗೂ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಹಾಗೂ ವಿಶ್ವ ಹಿಂದೂ ಪರಿಷದ್ ನ ದಕ್ಷಿಣ ಕರ್ನಾಟಕ ಪ್ರಾಂತ ಪ್ರಚಾರಕ ಬಸವರಾಜು ಇದ್ದರು.Sign in to your account
Username or Email Address


Password

 Remember Me


