ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಇಂದು ಡಿನೋಟಿಫಿಕೇಷನ್ ಭೂತ ಬೆನ್ನು ಬಿದ್ದಿದೆ. ಅದು ಕೂಡ ಒಂದೇ ದಿನ ಎರಡೆರಡು ಪ್ರಕರಣಗಳ ತನಿಖೆ ಮುಂದುವರೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.ಬೆಂಗಳೂರಿನ ಗಂಗೇನಹಳ್ಳಿ ಬಳಿಯ ಮಠದಹಳ್ಳಿಯ 1 ಎಕರೆ 11 ಗುಂಟೆ ಜಮೀನನ್ನು ನಿಯಮ ಮೀರಿ 2007 ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಜಯಕುಮಾರ್ ಹಿರೇಮಠ ಲೋಕಾಯಕ್ತಕ್ಕೆ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌  ರದ್ದು ಮಾಡುವಂತೆ ಬಿಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು.ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಏಕಸದಸ್ಯ ಪೀಠ ಅರ್ಜಿಯನ್ನು ವಜಾ ಮಾಡಿದ್ದು ಅಲ್ಲದೇ ಯಡಿಯೂರಪ್ಪ ಅವರಿಗೆ 25 ಸಾವಿರ ದಂಡ ಪಾವತಿಸುವಂತೆ ಆದೇಶ ನೀಡಿದೆ.ಮಠದಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಎರಡನೆಯ ಆರೋಪಿಯಾಗಿದ್ದಾರೆ. ಜೊತೆಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ.ನ್ನೊಂದು ಪ್ರಕರಣವಾದ ದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲೂ ಕೂಡ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದೆ. ಸಾಮಾಜಿಕ ಹೋರಾಟಗಾರ ಅಲಂಪಾಷಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಪರಿಶೀಲಿಸಿ ತನಿಖೆಯನ್ನು ಮುಂದುವರೆಸಲು ಆದೇಶವನ್ನು ನೀಡಿದೆ.2016 ರಲ್ಲಿ ಈ ಪ್ರಕರಣವನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ರದ್ದು ಪಡಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಆಲಂ ಪಾಷಾ. ದೇವನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುರುಗೇಶ್ ನಿರಾಣಿ ಮೊದಲ ಆರೋಪಿಯಾಗಿದ್ದರೆ ಯಡಿಯೂರಪ್ಪ ಅವರು ಎರಡನೆಯ ಆರೋಪಿಯಾಗಿದ್ದಾರೆ. 26 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.Sign in to your account
Username or Email Address


Password

 Remember Me


