ಬೆಂಗಳೂರು: ಪ್ರೀತಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದಿದೆ.ಅಭಿಲಾಷ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆ ವರದಕ್ಷಿಣೆ ಕಿರುಕುಳದಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಕಳೆದ ನಾಲ್ಕು ತಿಂಗಳ ಹಿಂದೆ ಶಶಿಕುಮಾರ್ ಎಂಬಾತನನ್ನು ಪ್ರೀತಿಸಿ ಅಭಿಲಾಷ ಮದುವೆಯಾಗಿದ್ದಳು. ಪ್ರೀತಿಸಿ ಮದುವೆಯಾದ ಕಾರಣ ವರದಕ್ಷಿಣೆ ಕೊಟ್ಟಿಲ್ಲ ಅಂತ ಗಂಡನ ಮನೆಯವರು ಕಿರುಕುಳ ನೀಡಿದ್ದಾರೆ. ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ದುರ್ಘಟನೆ ಸಂಭವಿಸಿದೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.ಭಾನುವಾರ ಸಂಜೆ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಅಭಿಲಾಷ ಶವ ಪತ್ತೆಯಾಗಿದೆ. ಅಭಿಲಾಷ ಪೋಷಕರಿಂದ ಶಶಿಕುಮಾರ್ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಅಂತ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಶ್ರೀ ರಾಮಪುರ ಪೊಲೀಸರು ಮೃತಳ ಪತಿ ಶಶಿಕುಮಾರ್ ವಶಕ್ಕೆ ಪಡೆದಿದ್ದಾರೆ.Sign in to your account
Username or Email Address


Password

 Remember Me


