ದಾವಣಗೆರೆ: ಗ್ರಾಮ ಪಂಚಾಯ್ತಿ ಚುನಾವಣೆಯ ಹಿನ್ನೆಲೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಕೃಷ್ಣಪ್ಪ (68) ಸಾವನ್ನಪ್ಪಿದ ನಿವೃತ್ತ ಶಿಕ್ಷಕ. ಇವರ ಪುತ್ರ ವಿಜಯೇಂದ್ರಗೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ದೇವಿಕೆರೆ ಪಂಚಾಚಾಯ್ತಿ ವ್ಯಾಪ್ತಿಯ ಮಿನಿಗರಹಳ್ಳಿ ಗ್ರಾಮದಲ್ಲಿ ಸೋತ ಗುಂಪಿನಿಂದ ಕೃಷ್ಣಪ್ಪ ಮೇಲೆ ಕಟ್ಟಿಗೆಯಿಂದ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡು ಕೃಷ್ಣಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೃತ ಕೃಷ್ಣಪ್ಪ ಸಂಬಂಧಿ ಗೆಲುವು ಸಾಧಿಸಿದ್ದರು. ಸೋಲು ಕಂಡವರು ಇಂದು ಉದ್ದೇಶ ಪೂರ್ವಕವಾಗಿ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ಇನ್ನು ಕೃಷ್ಣಪ್ಪ ಶವವನ್ನು ಮರಣೋತ್ತರ ಪರೀಕ್ಷೆಗೆ ಜಗಳೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ, ಮೃತದೇಹವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ.ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


