ಬೆಳಗಾವಿ: ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡಲಾಗುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡುವಂತೆ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವರಿಗೆ ಮನವಿ ಸಲ್ಲಿಸಲಾಯ್ತು.ಈ ವೇಳೆ ಮಾತನಾಡಿದ ಸಚಿವರು, ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಗೋಕಾಕ್- ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಣಯಿಸಲಾಗಿತ್ತು. ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಕೇಳಿದರು. ಹಾಗಾಗಿ ಪ್ರತ್ಯೇಕ ಜಿಲ್ಲೆಯ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿ ಬಳಿಕ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆಗೆ ಸಲಹೆ ನೀಡಲಾಗಿದೆ. ಇದೇ ತಾಂತ್ರಿಕ ಕಾರಣದಿಂದ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಉಳಿದಿದೆ ಎಂದರು.ಕೋವಿಡ್ ಮತ್ತು ಆರ್ಥಿಕ ಕಾರಣದಿಂದ ತಾಲೂಕು ರಚನೆ ಬಾಕಿ ಉಳಿದಿದೆ. ಸುಳ್ಳು ಹೇಳುವುದು ನನಗೆ ಬರೋದಿಲ್ಲ. ಬಳ್ಳಾರಿ ಜಿಲ್ಲೆ ವಿಭನೆ ಏಕೆ ಆಯ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರ ಕಾರಣವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಬಜೆಟ್ ಮುಗಿದ ಬಳಿಕ ನಿಯೋಗದ ಜೊತೆ ಹೋಗಿ ಮುಖ್ಯಮಂತ್ರಿಗಳನ್ನ ಭೇಟಿ ಮಾಡೋಣ. ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಸಚಿವರು ಭರವಸೆ ನೀಡಿದರು.


 Advertisement 







 Advertisement 




Sign in to your account
Username or Email Address


Password

 Remember Me


