ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯದ ಜೊತೆಗೆ ಮನವಿ ಕೂಡ ಮಾಡಿಕೊಂಡಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ. ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ ಎಂದು ಹಾರೈಸುತ್ತೇನೆ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ ಪಾಲನೆ ಮರೆಯದಿರಿ ಎಂದು ತಿಳಿಸಿದ್ದಾರೆ.ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ ಎಂದು ಹಾರೈಸುತ್ತೇನೆ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ ಪಾಲನೆ ಮರೆಯದಿರಿ. pic.twitter.com/Yluw0ow1et— B.S.Yediyurappa (@BSYBJP) December 31, 2020ಹೊಸ ವರ್ಷ ಎಲ್ಲರಿಗೂ ಸುಖ ಸಮೃದ್ಧಿ ತರಲಿ. ಕಳೆದ ವರ್ಷದ ಸಾಲಿನಲ್ಲಿ ಕಳೆದಿದ್ದ ಕೋವಿಡ್ ಸಾಂಕ್ರಾಮಿಕ ರೋಗದ ಕಾರ್ಮೋಡ ಕಳೆದು ಈ ವರ್ಷ ಸಹಜ ಸ್ಥಿತಿಗೆ ಮರಳಲಿ. ಹೊಸ ವರ್ಷ ಸಂಭ್ರಮದಿಂದ ಕೂಡಿರಲಿ ಆಚರಣೆ ಸಹಜವಾಗಿರಲಿ. ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸ್ ಮಾಡುವಂತೆ ಜನತೆಯಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.ಕೋವಿಡ್ ಎರಡನೇ ಅಲೆ ಹೊಸ ರೂಪದಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗವನ್ನ ತಡೆಗಟ್ಟುವ ಕೆಸಲದಲ್ಲಿ ಸರ್ಕಾರದ ಜೊತೆ ಸಹಕರಿಸಬೇಕು ಎಂದು ರಾಜ್ಯದ ಜನತೆಯಲ್ಲಿ ಸಿಎಂ ಮತ್ತೊಮ್ಮೆ ಮನವಿ ಮಾಡಿಕೊಂಡರು.






 Advertisement 




Sign in to your account
Username or Email Address


Password

 Remember Me


