ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  (Renukaswamy Murder Case)  ಮೂವರು ಆರೋಪಿಗಳಿಗೆ ಜಾಮೀನು (Bail) ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ  ಕಾರ್ತಿಕ್‌, ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.ಈ ಪ್ರಕರಣದಲ್ಲಿ ಕಾರ್ತಿಕ್‌, ಕೇಶವ್‌ಮೂರ್ತಿ, ನಿಖಿಲ್‌ ನಾಯಕ್‌ ಕ್ರಮವಾಗಿ ಎ 15, ಎ16, ಎ17 ಆರೋಪಿಗಳಾಗಿದ್ದರು.ಈ ಮೂವರು ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಆರೋಪಿಗಳು ನೇರವಾಗಿ  ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಮೂವರಿಗೆ ಇಂದು ಜಾಮೀನು ಸಿಕ್ಕಿದೆ.Sign in to your account
Username or Email Address


Password

 Remember Me


