ಯಾದಗಿರಿ: ಸಿಡಿಲು ಬಡಿದು ಒಂದೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೀನಕೇರ ತಾಂಡದಲ್ಲಿ ನಡೆದಿದೆ.ಮೃತರನ್ನು ಜೀನಕೇರ ತಾಂಡದ ನಿವಾಸಿಗಳಾದ ಒಂದೇ ಕುಟುಂಬದ ಚೇನು (22), ಕಿಶನ್ (30), ಸುಮಿ ಬಾಯಿ (30) ಸಾವನ್ನಪ್ಪಿದ್ದು, ಇನ್ನೊಬ್ಬ ಮೃತ ಬಾಲಕನ ಗುರುತು ಪತ್ತೆಯಾಗಿಲ್ಲ.ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್ಕುಟುಂಬಸ್ಥರು ಸೇರಿ ಈರುಳ್ಳಿ ಹಚ್ಚಲು ಜಮೀನಿಗೆ ತೆರಳಿದ್ದರು. ಈ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಕ್ಷಿಸಿಕೊಳ್ಳಲು ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಇದೇ ವೇಳೆ ಸಿಡಿಲು ಬಡಿದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.ಅವಘಡ ಸಂಭವಿಸಿದ ತಕ್ಷಣವೇ ಸ್ಥಳೀಯ ಆಸತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.ಯಾದಗಿರಿ (Yadagiri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಬಿಗ್ ಬಾಸ್ ಆರಂಭಕ್ಕೂ ಮೊದಲೇ ಕಂಟೆಸ್ಟೆಂಟ್ ಅನೌನ್ಸ್- ಯಾರದು?Sign in to your account
Username or Email Address


Password

 Remember Me


