ಬೆಂಗಳೂರು: ಕೊರೊನಾ ವಿಚಾರವಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಭೆ ನಡೆಸಿದರು.ಬೆಂಗಳೂರಿನಲ್ಲಿ ಕೊರೊನಾ ದಿನೇ ದಿನೇ ಜಾಸ್ತಿಯಾಗುತ್ತದೆ. ಒಟ್ಟು ಬೆಂಗಳೂರು ನಗರದಲ್ಲೇ ಸುಮಾರು 4,052 ಕೊರೊನಾ ಪ್ರಕರಣಗಳಿವೆ. ಇದರಲ್ಲಿ ಒಟ್ಟು 3,427 ಸಕ್ರಿಯ ಪ್ರಕರಣಗಳು ಇವೆ. ಮುಂದಿನ ದಿನದಲ್ಲಿ ಸೋಂಕು ಜಾಸ್ತಿಯಾಗುವ ಸಾಧ್ಯತೆ ಇದ್ದು, ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊರೊನಾ ರೋಗಿಗಳಿಗೆ ಬೆಡ್ ನಿರ್ಮಿಸುವ ಸಲುವಾಗಿ ಇಂದು ಸಿಎಂ ಸಭೆ ನಡೆಸಿ ಚರ್ಚಿಸಿದರು.ಮುಖ್ಯಮಂತ್ರಿ ಶ್ರೀ @BSYBJP ಅವರು, ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.1/2 pic.twitter.com/qtDoJbvnfH— CM of Karnataka (@CMofKarnataka) June 30, 2020ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಸಭೆಯ ಮುಖ್ಯಾಂಶಗಳು:
1. ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಮೀಸಲಿಡಲಾಗುತ್ತದೆ.
2. ಆದರೆ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ.
3. ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ.
4. ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು.
5. ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿವೆ. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿವೆ.
6. ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
7. ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.8. ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು.
9. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
10 ಇದಲ್ಲದೆ ಕೋವಿಡ್ ಕೇರ್ ಸೆಂಟರ್ ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದರು.Sign in to your account
Username or Email Address


Password

 Remember Me


