ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗಯವಂತೆ ಕಾಣುತ್ತಿಲ್ಲ. ಇಂದು ಕೂಡ ಡೆಡ್ಲಿ ಕೋವಿಡ್-19 ವೈರಸ್‍ಗೆ ಬೆಂಗಳೂರು, ಹಾಸನ, ಮಂಗಳೂರು, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಸಾವು ಸಂಭವಿಸಿದೆ.ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಕೊರೊನಾಗೆ ಬಲಿಯಾಗಿದ್ದಾರೆ. ಸೋಂಕು ದೃಢಪಡುತ್ತಿದ್ದಂತೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.ಇತ್ತ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಎಎಸ್‍ಐ ಕೂಡ ಕೊರೊನಾ ವೈಸರ್ ತಗುಲಿ ಸಾವನ್ನಪ್ಪಿದ್ದಾರೆ. ಎಎಸ್‍ಐ ಮೊನ್ನೆ ರಾತ್ರಿ ಮನೆಯ ಟಾಯ್ಲೆಟ್ ನಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಮನೆಯವರು ಆಸ್ಪತ್ರೆಗೆ ಸಾಗಿಸಿದ್ದರೂ ಬದುಕುಳಿಸಿರಲಿಲ್ಲ. ಕೊರೊನಾ ಶಂಕೆ ವ್ಯಕ್ತಪಡಿಸಿದ ವೈದ್ಯರು ಎಎಸ್‍ಐ ಗಂಟಲು ದ್ರವವನ್ನು ಕೋವಿಡ್-19 ಪರೀಕ್ಷೆಗೆ ಕಳುಹಿಸಿದ್ದರು. ಸದ್ಯ ರಿಪೋರ್ಟ್ ಆರೋಗ್ಯ ಅಧಿಕಾರಿಗಳ ಕೈ ಸೇರಿದ್ದು, ಪಾಸಿಟಿವ್ ಬಂದಿದೆ. ಇದಕ್ಕೂ ಮುನ್ನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ವರು ಪೊಲೀಸರು ಕೊರೊನಾಗೆ ಬಲಿಯಾಗಿದ್ದಾರೆ.ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ 57 ವರ್ಷದ ಮಹಿಳೆ ಮತ್ತು ಸುರತ್ಕಲ್ ಮೂಲದ 31 ವರ್ಷದ ಯುವಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಸಾವನ್ನಪ್ಪಿದರೆ, ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ.ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‍ಗೆ ಮತ್ತೊಂದು ಬಲಿಯಾಗಿದೆ. ತೀವ್ರ ಉಸಿರಾಟ ತೊಂದರೆ ಇಂದ ಬಳಲುತ್ತಿದ್ದ 52 ವರ್ಷದ ಪುರುಷ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಾವಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ರೋಗಿ-10,642 ಎಂದು ಗುರುತಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.ಮೃತ ವ್ಯಕ್ತಿ ಬಾಗಲಕೋಟೆ ತಾಲೂಕಿನ ಮುಡಪುಲಜೀವಿ ಗ್ರಾಮದ ನಿವಾಸಿ. ಕೆಲ ದಿನಗಳಿಂದ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ತಾನೇ ಬಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೋವಿಡ್ ನಿಯಾಮವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗುವುದು. ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಸ್ಪಷ್ಟನೆ ನೀಡಿದ್ದಾರೆ.ತುಮಕೂರು: ಕೊರೊನಾ ಶಂಕಿತ ನಗರದ 40 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ವ್ಯಕ್ತಿಯು ಬೆಂಗಳೂರಿನಿಂದ ತುಮಕೂರಿಗೆ ವಾಪಸ್ ಆಗಿದ್ದರು. ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳಿಸಿರುವ ವೈದ್ಯರು ರಿಪೋರ್ಟ್ ಗಾಗಿ ಕಾಯುತ್ತಿದ್ದಾರೆ.ಹಾಸನ: ನಗರದ 65 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅವರು ಜೂನ್ 17ರಂದು ಮುಂಬೈನಿಂದ ಹಾಸನಕ್ಕೆ ಆಗಮಿಸಿದ್ದರು. ಬಳಿಕ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಎರಡಕ್ಕೆ ಏರಿಕೆ ಕಂಡಿದೆ. ಇದಕ್ಕೂ ಮುನ್ನ 65 ವರ್ಷದ ವೃದ್ಧ ಡೆಡ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.Sign in to your account
Username or Email Address


Password

 Remember Me


