ಶಿವಮೊಗ್ಗ: ತಮ್ಮ ರಾಜ್ಯಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರಿಗಾಗಿ ಜೂನ್ 24ರಂದು ಬೆಂಗಳೂರಿನಿಂದ ಅಂತಿಮ ಶ್ರಮಿಕ್ ರೈಲುಗಳು ತೆರಳಲಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದ್ದಾರೆ.ಅಲ್ಲದೆ ಇದರ ಪ್ರಯೋಜನ ಪಡೆದುಕೊಳ್ಳ ಬಯಸುವವರು ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ತಮ್ಮ ರಾಜ್ಯಗಳಿಗೆ ತೆರಳ ಬಯಸುವ ಅನ್ಯ ರಾಜ್ಯಗಳ ಕಾರ್ಮಿಕರರು ಸೇವಾ ಸಿಂಧು ಆ್ಯಪ್‍ನಲ್ಲಿ ತಮ್ಮ ವಿವರಗಳನ್ನು ನೊಂದಾಯಿಸಿಕೊಳ್ಳಬೇಕು ಡಿಸಿ ಮನವಿ ಮಾಡಿದ್ದಾರೆ.ಸೇವಾ ಸಿಂಧುವಿನಲ್ಲಿ ನೊಂದಾಯಿಸಿಕೊಂಡಿರುವ ಕುರಿತಾದ ದಾಖಲೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿರುವ ಸೇವಾ ಕೌಂಟರಿನಲ್ಲಿ ಜೂನ್ 23 ರ ಮಧ್ಯಾಹ್ನ 3.30ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮೊಬೈಲ್ ಸಂಖ್ಯೆ 9845184795 ಅವರನ್ನು ಸಂಪರ್ಕಿಸಬಹುದಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


