ಹಾವೇರಿ: ವಿದ್ಯುತ್ ತಂತಿ ಹರಿದು ಬಿದ್ದಿದರಿಂದ ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಎತ್ತು, ಎಮ್ಮೆ, ಆಕಳುಗಳು ಸಜೀವ ದಹನವಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.ಜಿಲ್ಲೆಯ ಹಾನಗಲ್ ತಾಲೂಕಿನ ನಿಸ್ಸೀಮ ಆಲದಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಫಕ್ಕೀರಪ್ಪ ಜಾನುಗುಂಡಿ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ನಡೆದಿದೆ. ದನದ ಕೊಟ್ಟಿಗೆಯಲ್ಲಿದ್ದ ಎರಡು ಎತ್ತು, ಎರಡು ಎಮ್ಮೆ, ಒಂದು ಆಕಳು ಹಾಗೂ ಎರಡು ಕರುಗಳು ಸಜೀವ ದಹನವಾಗಿವೆ.ದನದ ಕೊಟ್ಟಿಗೆ ಊರಿನಿಂದ ದೂರ ಇದ್ದು, ಮಾಲೀಕರು ಊರಿನ ಮನೆಯಲ್ಲಿದ್ದಾಗ ಘಟನೆ ಸಂಭವಿಸಿದೆ. ನಿರ್ಜನ ಪ್ರದೇಶವಾಗಿದ್ದರಿಂದ ಬೆಂಕಿ ನಿಯಂತ್ರಿಸುವಲ್ಲಿ ತಡವಾಗಿದೆ. ಕೊಟ್ಟಿಗೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದ್ದಿದ್ದು, ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿದೆ. ಎತ್ತು, ಎಮ್ಮೆ, ಆಕಳು ಸಾವನ್ನಪ್ಪಿರುವುದರಿಂದ ರೈತ ಪಕ್ಕೀರಪ್ಪ ಅವರಿಗೆ ಎರಡು ಲಕ್ಷಕ್ಕೂ ಅಧಿಕ ರೂಪಾಯಿ ಹಾನಿಯಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


