ಮಂಗಳೂರು: ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಪೂಜೆ ಹಾಗೂ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ.ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಸೇರಿದಂತೆ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.40 ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದೆ. ಬೆಳಗ್ಗೆ 10:05ಕ್ಕೆ ಗ್ರಹಣ ಸ್ಮರ್ಶ ಹಾಗೂ 1:22ಕ್ಕೆ ಖಂಡಗ್ರಾಸ ಸೂರ್ಯಗ್ರಹಣ ಮೋಕ್ಷವಾಗಲಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಮಾತ್ರ ಇದ್ದು, ಸಮಯ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 6.30 ರಿಂದ 10 ಗಂಟೆಯ ರವರೆಗೆ ಹಾಗೂ ಮಧ್ಯಾಹ್ನ 3.30 ರಿಂದ 5.30 ವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ವಿಶೇಷ ಪೂಜೆ, ಹೋಮ ಇರುವುದಿಲ್ಲ.ಶ್ರೀ ಕ್ಷೇತ್ರ ಧರ್ಮಸ್ಥಳ
ಧರ್ಮಸ್ಥಳದಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇರುವುದಿಲ್ಲ. ಬೆಳಗ್ಗೆ 5.30ರಿಂದ ಬೆಳಗ್ಗೆ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮತ್ತೆ ಸಂಜೆ 4 ರಿಂದ ರಾತ್ರಿ 9 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ವಿಶೇಷ ಪೂಜೆ, ಹೋಮಗಳು ಇರುವುದಿಲ್ಲ.ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ
ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 9 ಗಂಟೆಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಗ್ರಹಣ ಸ್ಪರ್ಶದಿಂದ ಗ್ರಹಣ ಮೋಕ್ಷದವರೆಗೆ ಲೋಕ ಕಲ್ಯಾಣಾರ್ಥವಾಗಿ ಶಿವನಿಗೆ ಧಾರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಗ್ರಹಣ ಕಾಲದಲ್ಲಿ ಮಾಡಲಾಗುವುದು. ನಂತರ ಗ್ರಹಣ ಮುಕ್ತಿಯ ಬಳಿಕ ಗ್ರಹಣ ಶಾಂತಿ ಹೋಮ, ಮಹಾಪೂಜೆ ಈ ಕ್ಷೇತ್ರದಲ್ಲಿ ನಡೆಯಲಿದೆ.ಕಟೀಲು, ಪೊಳಲಿ ಕ್ಷೇತ್ರ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ವಿಶೇಷ ಪೂಜೆ, ಹೋಮಗಳು ಇರುವುದಿಲ್ಲ.Sign in to your account
Username or Email Address


Password

 Remember Me


