ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು ಒಬ್ಬರ ನಿರ್ಧಾರ ಅಲ್ಲ. ಮುಖ್ಯಮಂತ್ರಿಗಳಿಗೂ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಲು ಒಲವಿತ್ತು, ಆದ್ರೆ ಹೈ ಕಮಾಂಡ್ ಕೈ ಬಿಟ್ಟಿರುವುದು ಬೇಸರ ತಂದಿದೆ ಎಂದರು.ಕಾರಣಾಂತರಗಳಿಂದ ವಿಶ್ವನಾಥ್ ಅವರ ಹೆಸರನ್ನ ಕೈ ಬಿಡಲಾಗಿದೆ. ಅವರು ಒಂದು ಪಕ್ಷದ ಅಧ್ಯಕ್ಷರಾಗಿದ್ದವರು, ಅವರ ಆಗಮನ ಬಿಜೆಪಿಗೆ ಆನೆ ಬಲ ಬಂದಂತಾಗಿತ್ತು. ಆದರೆ ಸ್ವಲ್ಪ ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದರು.ಪಕ್ಷಕ್ಕೆ ದುಡಿದವರನ್ನ ಬಿಟ್ಟು, ಮೂಲ ಬಿಜೆಪಿಗರಿಗೆ ಇಬ್ಬರಿಗೆ ಟಿಕೆಟ್ ನೀಡುವ ಮೂಲಕ ಕಾಂಪ್ರಮೈಸಿಂಗ್ ಫಾರ್ಮುಲಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವರ ಬಳಿ ಮಾತನಾಡಿ ಮನವೊಲಿಸಲು ಪ್ರಯತ್ನ ಮಾಡುವೆ ಎಂದು ನಾಗೇಶ್ ತಿಳಿಸಿದರು.ಬುಧವಾರ ತಡರಾತ್ರಿ ಬಿಜೆಪಿ ತನ್ನ ಮೇಲ್ಮನೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಹೆಚ್. ವಿಶ್ವನಾಥ್ ಬಿಜೆಪಿ ಬಿಗ್ ಶಾಕ್ ನೀಡಿದೆ. ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಈ ನಾಲ್ವರಿಗೆ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿರೋದು ಮೇಲ್ನೋಟಕ್ಕೆ ಕಾಣಿಸುತ್ತಿದೆ.Sign in to your account
Username or Email Address


Password

 Remember Me


