ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, ಪರಿಣಾಮ ಕಾರದಗಾ-ಭೋಜ ಗ್ರಾಮಗಳ ನಡುವಿನ ಸಂಪರ್ಕ ಸೇತುವೆ ಜಲಾವೃತವಾಗಿದೆ.ಕೆಳ ಹಂತದ ಸೇತುವೆ ಜಲಾವೃತವಾಗಿದ್ದು, ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ದಿಢೀರ್ ಹೆಚ್ಚಳವಾಗಿದ್ದು, ಒಂದೇ ರಾತ್ರಿಯಲ್ಲಿ ನೀರಿನ ಪ್ರಮಾಣ 3 ರಿಂದ 4 ಅಡಿ ಹೆಚ್ಚಳವಾಗಿದೆ. ಹೀಗಾಗಿ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಹೆಚ್ಚಿದೆ.Sign in to your account
Username or Email Address


Password

 Remember Me


