ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್‍ಪಿ ಹಣ ಸಹಾಯ ಮಾಡಿದ್ದಾರೆ.ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ ಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪೂರ ಗ್ರಾಮದ ರೈತ ಲಕ್ಕಪ್ಪ ಸಂಗಪ್ಪ ದೊಡ್ಡಮನಿ ಅವರು ತಿಂಗಳ ಹಿಂದೆ ತಾನು ಕೊರೆಯಿಸಿದ ಕೊಳವೆ ಬಾವಿಯಲ್ಲಿ ನೀರು ಬಾರದೆಯಿದ್ದಾಗ ಸಾಲದ ಸುಳಿಯಲ್ಲಿ ಸಿಲುಕಿ ಮನನೊಂದು ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಡೆದ ಕೆಲ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು.ಮೃತ ರೈತನ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಣ್ಣಾರೆ ಕಂಡು 50 ಸಾವಿರ ರೂಪಾಯಿಯನ್ನು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ವೈಯಕ್ತಿವಾಗಿ ನೀಡಿದ್ದಾರೆ. ನಿಂಬರಗಿ ಅವರ ಪರವಾಗಿ ರಾಯಬಾಗ ವೃತ್ತ ನಿರೀಕ್ಷಕ (ಸಿ.ಪಿ.ಐ) ಕೆ.ಎಸ್.ಹಟ್ಟಿ ಬಂದು ಮೃತ ರೈತನ ಪತ್ನಿ ಕಸ್ತೂರಿ ಲಕ್ಕಪ್ಪ ದೊಡ್ಡಮನಿ, ಪುತ್ರ ಸಂಗಮೇಶ ದೊಡ್ಡಮನಿ ಹಾಗೂ ಪುತ್ರಿ ಜಯಶ್ರೀ ದೊಡ್ಡಮನಿ ಅವರಿಗೆ ನಗದು ಹಣ ನೀಡಿದ್ದಾರೆ.Sign in to your account
Username or Email Address


Password

 Remember Me


