ಕೋಲಾರ: 22 ವರ್ಷದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹೈದರಿ ನಗರದಲ್ಲಿ ನಡೆದಿದೆ.22 ವರ್ಷದ ತಸ್ಮಿಯಾಖಾನಂ ಆತ್ಮಹತ್ಯೆಗೆ ಶರಣಾದ ಗೃಹಿಣಿ. ತಸ್ಮಿಯಾಖಾನಂರನ್ನು ಬೆಂಗಳೂರಿನ ಕೆ.ಅರ್.ಪುರಂನ ಗಾಂಧೀನಗರದ ಶೋಯಬ್ ಎಂಬಾತನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿಯ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ತಸ್ಮಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.ಒಂದೂವರೆ ವರ್ಷದ ಹಿಂದೆ ತಸ್ಲಿಯಾಖಾನಂ ಮತ್ತು ಶೋಯಬ್ ಮದುವೆ ಆಗಿತ್ತು. ವರದಕ್ಷಿಣೆ ಕಿರುಕುಳ ಹಿನ್ನೆಲೆ ತಸ್ಮಿಯಾ ತವರು ಮನೆ ಸೇರಿದ್ದರು. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


