ಮಂಗಳೂರು: ಹಾಡಹಗಲೇ ಉದ್ಯಮಿಯೊಬ್ಬರ ಬರ್ಬರ ಹತ್ಯೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ.ಅಬ್ದುಲ್ ಲತೀಫ್(38) ಹತ್ಯೆಯಾದ ಉದ್ಯಮಿ. ಮೂಡಬಿದ್ರೆಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಲತೀಫ್ ರನ್ನು ದುಷ್ಕರ್ಮಿಗಳು ತಲ್ವಾರ್, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.ಕಾರು ಮತ್ತು ಬೈಕಿನಲ್ಲಿ ಬಂದ ಎಂಟು ಮಂದಿ ದುಷ್ಕರ್ಮಿಗಳು ಜನರೆದುರಿನಲ್ಲೇ ಬೀಭತ್ಸವಾಗಿ ದಾಳಿ ಮಾಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಭೇಟಿ ನೀಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.






 Advertisement 




Sign in to your account
Username or Email Address


Password

 Remember Me


