ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ.ಕೊರೊನಾ ಭೀತಿಯಿಂದ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ.ಮಾರ್ಗಸೂಚಿ ಏನು?
ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ಹೋಟೆಲ್‍ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಕಡ್ಡಾಯವಾಗಿರುತ್ತದೆ. ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಇರಬೇಕು. ಹೋಟೆಲ್ ರಿಸೆಪ್ಷನ್‍ನಲ್ಲಿ ಗೆಸ್ಟ್‍ಗಳು ಐ.ಡಿ. ಕಾರ್ಡ್, ಟ್ರಾವೆಲ್ ಹಿಸ್ಟರಿಯನ್ನು ಕಡ್ಡಾಯವಾಗಿ ನೀಡಬೇಕು. ಸಂಪರ್ಕ ರಹಿತ ಪ್ರಕ್ರಿಯೆ ಅಂದರೆ ಕ್ಯೂ ಆರ್ ಕೋಡ್ ಅನ್ನು ಹೋಟೆಲ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.ಅತಿಥಿಗಳ ಲಗೇಜ್‍ಗೆ ಕ್ರಿಮಿನಾಶಕ ಸಿಂಪಡಿಸಬೇಕು. ಹೋಟೆಲ್ ಅತಿಥಿಗಳು ಕಂಟೈನ್ಮೆಂಟ್ ಝೋನ್‍ಗೆ ಭೇಟಿ ನೀಡಬಾರದು. ರೆಸ್ಟೋರೆಂಟ್‍ನಲ್ಲಿ ಸಾಮಾಜಿಕ ಅಂತರ ಕಾಪಾಡುವ ರೀತಿ ಸೀಟುಗಳನ್ನು ವ್ಯವಸ್ಥೆ ಮಾಡಿರಬೇಕು. ಡಿಜಿಟಲ್ ಪೇಮೆಂಟ್‍ಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಫೆಟ್ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಹೋಟೆಲ್‍ಗಳಿಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.Sign in to your account
Username or Email Address


Password

 Remember Me


