ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ.ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ ಮಾಡಿದೆ.ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


