ಶಿವಮೊಗ್ಗ: ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರೂಪ ಎಂಬುವರಿಗೆ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ಸ್ಪಂದಿಸಿ ತಾವೇ ಸ್ವತಃ ಮಹಿಳೆ ಮನೆಗೆ ತೆರಳಿ ಒಂದು ತಿಂಗಳಿಗೆ ಆಗುವಷ್ಟು  ದಿನಸಿ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರೂಪ ಎಂಬ ಮಹಿಳೆ ಲಾಕ್‍ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಊಟಕ್ಕೂ ಸಮಸ್ಯೆ ಆಗಿದೆ ಎಂದು ಕಾರ್ಯಕ್ರಮದ ಮೂಲಕ ಮನವಿ ಮಾಡಿಕೊಂಡಿದ್ದರು.ತಮ್ಮೂರಿನ ಮಹಿಳೆಯೊಬ್ಬರು ಊಟದ ಸಮಸ್ಯೆ ಎಂದು ಪಬ್ಲಿಕ್ ಟಿವಿಯಲ್ಲಿ ಮನವಿ ಮಾಡಿಕೊಂಡಿದ್ದನ್ನು ಗಮನಿಸಿದ ದೇವೇಂದ್ರಪ್ಪ ಅವರು ಮಹಿಳೆಗೆ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಕಿಟ್ ನೀಡಿ ಸಹಾಯ ಹಸ್ತ ಚಾಚಿದ್ದಾರೆ.Sign in to your account
Username or Email Address


Password

 Remember Me


