ಯಾದಗಿರಿ: ಹೋಮ್ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಿದರೆ ಹೊರಗಡೆ ಓಡಾಡುತ್ತಿದ್ದು, ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ವಿವಿಧ ತಾಂಡಗಳ 4 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಭಾನು(42), ಲಕ್ಕರ್(52), ಶಂಕರ್(27), ರವಿ(26)ಯವರ ವಿರುದ್ಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರೆಲ್ಲರೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದು, ಈಗಾಗಲೇ ಹಾಸ್ಟೆಲ್ ಕ್ವಾರೆಂಟನ್ ಮುಗಿಸಿದ್ದಾರೆ. ಇನ್ನೂ 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಆದರೆ ಬೇಕಾಬಿಟ್ಟಿಯಾಗಿ ಓಡಾಡಿದ್ದಾರೆ.ಜಿಲ್ಲಾಡಳಿತದ ಸೂಚನೆಯನ್ನು ನಿರ್ಲಕ್ಷಿಸಿ, ಲಾಕ್‍ಡೌನ್ ನಿಯಮಗಳನ್ನು ಮೀರಿ ತಮ್ಮ ತಾಂಡಗಳಲ್ಲಿ ತಿರುಗಾಟ ನಡೆಸಿದ್ದರು. ಈ ಹಿನ್ನೆಲೆ ಇವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.Sign in to your account
Username or Email Address


Password

 Remember Me


