ಹಾವೇರಿ: ನಾನು ಸಹ ಪಕ್ಷದಲ್ಲಿಯ ಹಿರಿಯ ನಾಯಕರಲ್ಲಿ ಒಬ್ಬ. ಹಾಗಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಪಕ್ಷದಲ್ಲಿಯ ಹಿರಿಯರು ಶಮನ ಮಾಡುತ್ತಾರೆ. ನಾನು ಪರಿಶಿಷ್ಠ ಜಾತಿಯ ಬಲಗೈ ಮುಖಂಡ. ರಾಜ್ಯದಲ್ಲಿ ಬಲಗೈ ಸಮುದಾಯಕ್ಕೆ ಇದುವರೆಗೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳು ನಮ್ಮ ಸಮುದಾಯಕ್ಕೆ ಅವಕಾಶ ನೀಡುತ್ತೇನೆ ಎಂದು ಹೇಳಿದ್ದಾರೆ. ಎಲ್ಲರೂ ಸಚಿವರಾಗಲು ನಾನಾ ತಂತ್ರಗಳನ್ನು ಮಾಡುತ್ತಿದ್ದು, ಅದು ಹೊರಗಡೆ ಭಿನ್ನಾಭಿಪ್ರಾಯದ ರೀತಿಯಲ್ಲಿ ಕಾಣಿಸುತ್ತಿದೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಶಮನವಾಗಲಿದೆ ಎಂದು ಹೇಳಿದರು.ಅಧಿಕಾರ ಬೇಕೆಂದಾಗ ಭಿನ್ನಾಭಿಪ್ರಾಯ ಉಂಟಾಗೋದು ಸಹಜ. ತಮಗೆ ಸಚಿವ ಸ್ಥಾನ ನೀಡಲಿಲ್ಲ ಅಂದ್ರೆ ಯಡಿಯೂರಪ್ಪನವರನ್ನು ಕೆಳಗೆ ಇಳಿಸ್ತೀವಿ ಅಂತಾ ಕೆಲವರು ಆಂತರಿಕವಾಗಿ ಹೇಳ್ತಾರೆ. ಆದ್ರೆ ಯಾರು ಅದನ್ನು ಬಹಿರಂಗವಾಗಿ ಹೇಳುತ್ತಿಲ್ಲ. ಹಿರಿಯ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡಿ, ಅಸಮರ್ಥರನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಉಮೇಶ್ ಕತ್ತಿಯವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


