ಕಾರವಾರ/ಹಾವೇರಿ: ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಸಿಡಿಲಿಗೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಭಾನುವಾರ ರಾತ್ರೀ ಧಾರಾಕಾರ ಮಳೆಯಾಗಿದೆ. ಮಳೆಯಿಂದ ಸಿಡಿಲು ಬಡಿದು ಶೋಭಾ ಚಂದ್ರಕಾಂತ ಗೌಡ (37) ಸಾವನ್ನಪ್ಪಿದ್ದಾರೆ. ಅಲ್ಲದೇ ಸಿಡಿಲು ಬಡಿದು ಇಬ್ಬರು ಮಕ್ಕಳಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಈ ಘಟನೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಇನ್ನೂ ಹಾವೇರಿ ಜಿಲ್ಲೆಯ ಕೆಲವೆಡೆ ಸಿಡಿಲು, ಗುಡುಗು ಮತ್ತು ಬಿರುಗಾಳಿ ಸಮೇತ ಧಾರಾಕಾರ ಮಳೆಯಾಗಿದೆ. ಸಿಡಿಲು ಬಡಿದು ಓರ್ವ ರೈತ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸನಿಡನೇಗಿಲು ಗ್ರಾಮದ ಬಳಿ ನಡೆದಿದೆ.ಮೃತಪಟ್ಟ ರೈತ ಮಹಿಳೆಯನ್ನ ಮಲ್ಲವ್ವ ನಾಯ್ಕರ (55) ಎಂದು ಗುರುತಿಸಲಾಗಿದೆ. ಜಮೀನಿಗೆ ಮೆಕ್ಕೆಜೋಳ ಬಿತ್ತನೆ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಿರೇಕೆರೂರು ಪಟ್ಟಣದಲ್ಲಿ ಬಿರುಗಾಳಿಗೆ ಸರ್ಕಾರಿ ಶಾಲೆಯ ಮೇಲ್ಛಾವಣಿ ಹಾರಿ ಹೋಗಿವೆ. ಬಿರುಗಾಳಿ ಮಳೆಗೆ ಜಿಲ್ಲೆಯ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.ಬೆಳಗಾವಿ, ಧಾರವಾಡ ಮತ್ತು ಮಲೆನಾಡು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಇತ್ತ ವಿಜಯಪುರ ಜಿಲ್ಲೆಯಲ್ಲೂ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಹೀಗಾಗಿ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಣೆSign in to your account
Username or Email Address


Password

 Remember Me


